ADVERTISEMENT

ಅಪಘಾತ: ದಂಪತಿ ಸಾವು

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2024, 16:11 IST
Last Updated 19 ಫೆಬ್ರುವರಿ 2024, 16:11 IST

ಚನ್ನರಾಯಪಟ್ಟಣ: ಬೈಕಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕಿನಲ್ಲಿದ್ದ ದಂಪತಿ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಬರಗೂರು ಹ್ಯಾಂಡ್‍ಪೋಸ್ಟ್ ಬಳಿ ಸೋಮವಾರ ಮಧ್ಯಾಹ್ನ ನಡೆದಿದೆ.

ದಂಡಿಗನಹಳ್ಳಿ ಹೋಬಳಿ ಅಗ್ರಹಾರ ಕೊಪ್ಪಲು ಗ್ರಾಮದ ಚಂದ್ರೇಗೌಡ (60), ಪತ್ನಿ ಹೇಮಲತಾ (55) ಮೃತಪಟ್ಟವರು. ಉದಯಪುರದಲ್ಲಿ ಸಂಬಂಧಿಕರ ಮದುವೆ ಸಮಾರಂಭದಲ್ಲಿ ಪಾಲ್ಗೊಂಡ ನಂತರ ಊರಿಗೆ ಹಿಂದಿರುಗುತ್ತಿದ್ದಾಗ ರಸ್ತೆಯ ತಿರುವಿನಲ್ಲಿ ಕಾರು ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಸಂಚಾರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT