ADVERTISEMENT

ಅರಕಲಗೂಡು: ಮಾ. 12 ರಂದು ಬಿಎಸ್ ಪಿ ವಿಭಾಗೀಯ ಮಟ್ಟದ ಸಮಾವೇಶ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2024, 13:07 IST
Last Updated 27 ಫೆಬ್ರುವರಿ 2024, 13:07 IST
ಅರಕಲಗೂಡಿನಲ್ಲಿ ಮಂಗಳವಾರ ನಡೆದ ಬಿಎಸ್ ಪಿ ಪದಾಧಿಕಾರಿಗಳು ಮತ್ತು ಕಾರ್ಯಕರ್ತರ ಸಭೆಯಲ್ಲಿ ಜಿಲ್ಲಕಾಧ್ಯಕ್ಷ ಅತ್ನಿ ಹರೀಶ್ ಮಾತನಾಡಿದರು. ಕಾರ್ಯದರ್ಶಿ ಸೋಮಶೇಖರ್ ಹಾಗೂ ಮುಖಂಡರು ಪಾಲ್ಗೊಂಡಿದ್ದರು.
ಅರಕಲಗೂಡಿನಲ್ಲಿ ಮಂಗಳವಾರ ನಡೆದ ಬಿಎಸ್ ಪಿ ಪದಾಧಿಕಾರಿಗಳು ಮತ್ತು ಕಾರ್ಯಕರ್ತರ ಸಭೆಯಲ್ಲಿ ಜಿಲ್ಲಕಾಧ್ಯಕ್ಷ ಅತ್ನಿ ಹರೀಶ್ ಮಾತನಾಡಿದರು. ಕಾರ್ಯದರ್ಶಿ ಸೋಮಶೇಖರ್ ಹಾಗೂ ಮುಖಂಡರು ಪಾಲ್ಗೊಂಡಿದ್ದರು.   

ಅರಕಲಗೂಡು: ಸಕಲೇಶಪುರದಲ್ಲಿ ಮಾ. 12 ರಂದು ನಡೆಯುವ ಬಿಎಸ್‌ಪಿ ಮೈಸೂರು ವಿಭಾಗ ಮಟ್ಟದ ಸಮಾವೇಶದಲ್ಲಿ 8 ಜಿಲ್ಲೆಗಳ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಜಿಲ್ಲಾ ಘಟಕದ ಅಧ್ಯಕ್ಷ ಅತ್ನಿ ಹರೀಶ್ ತಿಳಿಸಿದರು.

ಪಟ್ಟಣದಲ್ಲಿ ಮಂಗಳವಾರ ನಡೆದ ಪಕ್ಷದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ,  ಜಿಲ್ಲೆಯಲ್ಲಿ ಮೊದಲಬಾರಿಗೆ ನಡೆಯುತ್ತಿರುವ ಸಮಾವೇಶವು ಜಿಲ್ಲೆಯಲ್ಲಿ ಪಕ್ಷಕ್ಕೆ ಬಲತುಂಬಲು ನೆರವಾಗಲಿದೆ. ತಾಲ್ಲೂಕಿನಿಂದ ಅತ್ಯಂತ ಹೆಚ್ಚಿನ ಕಾರ್ಯಕರ್ತರು ಸ್ವಯಂ ಪ್ರೇರಣೆಯಿಂದ ಭಾಗವಹಿಸಬೇಕು ಎಂದರು.

 ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೋಮಶೇಖರ್, ತಾಲ್ಲೂಕು ಘಟಕದ ಪದಾಧಿಕಾರಿಗಳು ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.