ಸಕಲೇಶಪುರ: ತಾಲ್ಲೂಕಿನ ಆಲುವಳ್ಳಿ ಗ್ರಾಮದಲ್ಲಿ ಕಾಡಾನೆಗಳ ದಾಳಿಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ಹಾಗೂ ಆಸ್ತಿಪಾಸ್ತಿ ಹಾನಿಯಾಗಿದೆ.
ಜಮೀನಿಗೆ ನುಗ್ಗಿದ ಕಾಡಾನೆಗಳು ಸುಮಾರು 200ಕ್ಕೂ ಹೆಚ್ಚು ಅಡಿಕೆ ಮರಗಳನ್ನು, 50ಕ್ಕೂ ಹೆಚ್ಚು ಕಾಫಿ ಗಿಡಗಳನ್ನು, ಏಲಕ್ಕಿ, ಬಾಳೆ ಹಾಗೂ ಇನ್ನಿತರ ಬೆಳೆಗಳನ್ನು ನಾಶ ಮಾಡಿವೆ ಎಂದು ರೈತ ಧರ್ಮೇಗೌಡ ಅಳಲು ತೋಡಿಕೊಂಡಿದ್ದಾರೆ. ನೀರು ಹಾಯಿಸುವ ಪೈಪ್ಗಳನ್ನು ಸಹ ತುಳಿದು ಪುಡಿ ಮಾಡಿ ಭಾರೀ ಪ್ರಮಾಣದ ನಷ್ಟ ಉಂಟುಮಾಡಿದೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.