ಅರಸೀಕೆರೆ: ತಾಲ್ಲೂಕಿನ ಜಾಜೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಟಿಕೆರೆ ಗ್ರಾಮದ ನಾರಿನ ಕಾರ್ಖಾನೆಗೆ ಬೆಂಕಿ ತಗುಲಿ, ₹25 ಲಕ್ಷ ಮೌಲ್ಯದ ಹಾನಿಯಾಗಿದೆ.
ದಾರಿಹೋಕರು ನೋಡಿ, ತಕ್ಷಣ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಸಿಬ್ಬಂದಿ, ರಾತ್ರಿ 12 ಗಂಟೆಯವರೆಗೆ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಬೇಸಿಗೆ ಸಮೀಪಸುತ್ತಿದ್ದಂತೆ ರೈತರು ಎಚ್ಚರಿಕೆಯಿಂದ ಇರಬೇಕು. ಇಂತಹ ಘಟನೆಗಳು ಸಂಭವಿಸದಂತೆ ನೋಡಿಕೊಳ್ಳಬೇಕು ಎಂದು ತಹಶೀಲ್ದಾರ್ ಸಂತೋಷಕುಮಾರ್ ತಿಳಿಸಿದರು.
ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿಗಳು, ಅಗ್ನಿಶಾಮಕದಳದ ಸಿಬ್ಬಂದಿ, ಗ್ರಾಮಸ್ಥರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.