ADVERTISEMENT

ಹೆತ್ತೂರು | ಗೌರಿ– ಗಣೇಶ ಮೂರ್ತಿಗಳ ಅದ್ಧೂರಿ ಮೆರವಣಿಗೆ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2024, 12:57 IST
Last Updated 19 ಸೆಪ್ಟೆಂಬರ್ 2024, 12:57 IST
ಹೆತ್ತೂರು ಗಣಪತಿ ಸೇವಾ ಸಮಿತಿಯಿಂದ ಗ್ರಾಮದಲ್ಲಿ ಪ್ರತಿಷ್ಠಾಪಿಸಿದ್ದ ಗೌರಿ–ಗಣೇಶ ವಿಗ್ರಹದ ಮೆರವಣಿಗೆ ಗುರುವಾರ ಅದ್ಧೂರಿಯಾಗಿ ನಡೆಯಿತು
ಹೆತ್ತೂರು ಗಣಪತಿ ಸೇವಾ ಸಮಿತಿಯಿಂದ ಗ್ರಾಮದಲ್ಲಿ ಪ್ರತಿಷ್ಠಾಪಿಸಿದ್ದ ಗೌರಿ–ಗಣೇಶ ವಿಗ್ರಹದ ಮೆರವಣಿಗೆ ಗುರುವಾರ ಅದ್ಧೂರಿಯಾಗಿ ನಡೆಯಿತು   

ಹೆತ್ತೂರು: ಇಲ್ಲಿನ ಗಣಪತಿ ಸೇವಾ ಸಮಿತಿ ವತಿಯಿಂದ ಗ್ರಾಮ ಪಂಚಾಯಿತಿ ಕಟ್ಟಡದಲ್ಲಿ ಪ್ರತಿಷ್ಠಾಪಿಸಿದ್ದ 129ನೇ ವರ್ಷದ ಗೌರಿ-ಗಣೇಶ ಮೂರ್ತಿಗಳ ಅದ್ಧೂರಿ ಮೆರವಣಿಗೆ ನಡೆಸಿ, ಗುರುವಾರ ವಿಸರ್ಜನೆ ಮಾಡಲಾಯಿತು.

ಗಣೇಶ ಚರ್ತರ್ಥಿಯಂದು ಪ್ರತಿಷ್ಠಾಪಿಸಿದ್ದ ಗೌರಿ–ಗಣೇಶ ಮೂರ್ತಿಗೆ ಮೂರು ವಾರದಿಂದ ವಿಶೇಷ ಪೂಜೆ ಕಾರ್ಯಕ್ರಮ ನಡೆಸಲಾಯಿತು. ವಿಸರ್ಜನಾ ಮಹೋತ್ಸವದ ಅಂಗವಾಗಿ ಗುರುವಾರ ಬೆಳಿಗ್ಗೆ ಗಣಪತಿ ಮಹಾ ಮಂಗಳಾರತಿ ಸೇರಿದಂತೆ ಧಾರ್ಮಿಕ ವಿಧಿಗಳೊಂದಿಗೆ ಪೂಜೆ ನೆರವೇರಿಸಲಾಯಿತು. ನಂತರ ಪ್ರಸಾದ ವಿನಿಯೋಗ ನಡೆಯಿತು.

ಪ್ರಮುಖ ರಸ್ತೆಗಳನ್ನು ಮಲೆನಾಡು ಶೈಲಿಯ ತೋರಣಗಳಿಂದ ಸಿಂಗರಿಸಲಾಗಿತ್ತು. ಬಣ್ಣ– ಬಣ್ಣದ ಹೂವು, ಹಾರಗಳಿಂದ ಅಲಂಕಾರಗೊಂಡಿದ್ದ ಗಣಪತಿ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ, ಟ್ರ್ಯಾಕ್ಟರ್‌ ಮೂಲಕ ಗ್ರಾಮದ ಪ್ರಮುಖ ಬದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಹೆತ್ತೂರು ವೃತದಲ್ಲಿ ಜೆಸಿಬಿ ಮೂಲಕ ಗೌರಿ– ಗಣೇಶ್ ಮೂರ್ತಿಗಳಿಗೆ ಪುಷ್ಪಾರ್ಪಣೆ ಮಾಡಲಾಯಿತು.

ADVERTISEMENT

ಮೆರವಣಿಗೆಯಲ್ಲಿ ನೂರಾರು ಸಂಖ್ಯೆಯಲ್ಲಿ ಯುವಕರು, ಯುವತಿಯರು ಕೇಸರಿ ಶಾಲು ಹಾಕಿಕೊಂಡು ತಮಟೆ, ಡ್ರಮ್‌ಸೆಟ್‌, ವಾದ್ಯಮೇಳ ಸದ್ದಿಗೆ ಕುಣಿದು ಸಂಭ್ರಮಿಸಿದರು. ಬಳಿಕ ಗಣೇಶ ಮೂರ್ತಿಯನ್ನು ಐಗೂರು ರಸ್ತೆಯಲ್ಲಿರುವ ಸಂತೆ ಕೆರೆಯಲ್ಲಿ ವಿಸರ್ಜನೆ ಮಾಡಲಾಯಿತು.

ಸೇವಾ ಸಮಿತಿ ಅಧ್ಯಕ್ಷ  ಹರ್ಷ, ಪದಾಧಿಕಾರಿಗಳಾದ ಉಮೇಶ್, ಎಚ್.ಬಿ. ಗಿರೀಶ್, ಹೇಮಂತ್ ಕುಮಾರ್, ಸಂಚಿತ್, ಕೌಶಿಕ್, ಆನಂದ, ಶ್ರೀಧರ್, ಮಹೇಶ್, ಧರಣೇಂದ್ರ ಭಾಗವಹಿಸಿದ್ದರು.

ಹೆತ್ತೂರು ಗಣಪತಿ ಸೇವಾ ಸಮಿತಿಯಿಂದ ಗ್ರಾಮದಲ್ಲಿ ಪ್ರತಿಷ್ಠಾಪಿಸಿದ್ದ ಗೌರಿ–ಗಣೇಶ ವಿಗ್ರಹದ ಮೆರವಣಿಗೆಯಲ್ಲಿ ಕುಣಿದು ಕುಪ್ಪಳಿಸಿದ ಯುವಕರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.