ADVERTISEMENT

ಅ.24 ರಿಂದ ಹಾಸನಾಂಬ ದರ್ಶನೋತ್ಸವ ಆರಂಭ: ದೇವಿಯ ದರ್ಶನಕ್ಕೆ ಕಾದಿರುವ ಭಕ್ತಗಣ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2024, 7:52 IST
Last Updated 21 ಅಕ್ಟೋಬರ್ 2024, 7:52 IST
<div class="paragraphs"><p>ಸೋಮವಾರ ಹಾಸನಾಂಬ ದೇವಿಯ ಗರ್ಭಗುಡಿಯಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು.</p></div>

ಸೋಮವಾರ ಹಾಸನಾಂಬ ದೇವಿಯ ಗರ್ಭಗುಡಿಯಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು.

   

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ.  ಆಶ್ವೀಜ ಮಾಸದ ಪೌರ್ಣಿಮೆಯ ನಂತರ ಬರುವ ಮೊದಲ ಗುರುವಾರ ಹಾಸನಾಂಬ ದೇಗುಲದ ಬಾಗಿಲು ತೆರೆಯಲಾಗುತ್ತಿದೆ. ಬಲಿಪಾಡ್ಯಮಿಯ ಮಾರನೇ ದಿನ ದೇಗುಲದ ಬಾಗಿಲು ಮುಚ್ಚುವುದು ಪ್ರತೀತಿ.

ಇದೀಗ ಆಶ್ವೀಜ ಪೌರ್ಣಿಮೆಯ ನಂತರ ಬರುವ ಮೊದಲ ಗುರುವಾರ (ಅ.24 ರಂದು ದೇಗುಲದ ಬಾಗಿಲು ತೆರೆದು ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಗುತ್ತಿದ್ದು, ಭರದ ಸಿದ್ಧತೆಗಳು ಸಾಗಿವೆ.  ಬಲಿಪಾಡ್ಯಮಿ ಮಾರನೇ ದಿನವಾದ ನವೆಂಬರ್ 3 ರಂದು ಜಾತ್ರಾ ಮಹೋತ್ಸವಕ್ಕೆ ತೆರೆ ಬೀಳಲಿದೆ. ಹಾಸನಾಂಬ ಉತ್ಸವಕ್ಕೆ ಈಗಾಗಲೇ ಜಿಲ್ಲಾಡಳಿತ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದೆ. ಈ ಬಾರಿ ಹಾಸನಾಂಬ ವೆಬ್‌ಸೈಟ್ ಸಹ ಆರಂಭಿಸಲಾಗಿದೆ.

ADVERTISEMENT

ಹಾಸನಾಂಬ ಉತ್ಸವ ಸಂದರ್ಭದಲ್ಲಿ ಅಧಿಕಾರಿಗಳು ಹೇಗೆ ಕೆಲಸ ನಿರ್ವಹಿಸಬೇಕು ಎಂಬುದರ ಕುರಿತು ಈಗಾಗಲೇ ಹಲವು ಸಭೆ, ಕಾರ್ಯಾಗಾರಗಳನ್ನು ನಡೆಸಿ, ಸೂಚನೆ ನೀಡಲಾಗಿದೆ.   ಹಾಸನಾಂಬ ಮತ್ತು ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವವನ್ನು ಊರಿನ ಹಬ್ಬದಂತೆ ಆಚರಿಸಲು ಹಾಗೂ ಬರುವ ಭಕ್ತಾದಿಗಳಿಗೆ ಯಾವುದೇ ತೊಂದರೆ ಆಗದಂತೆ ವಹಿಸಿರುವ ಜವಾಬ್ದಾರಿಯನ್ನು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಹಾಗೂ ಸಂಘ ಸಂಸ್ಥೆಗಳು ನಿರ್ವಹಿಸುವಂತೆ ಜಿಲ್ಲಾಧಿಕಾರಿ ಸಿ.ಸತ್ಯಭಾಮಾ ಸೂಚನೆ ನೀಡಿದ್ದಾರೆ.

ಹಿಂದಿನ ವರ್ಷದ ವಿಡಿಯೋ ತುಣುಕು ವೀಕ್ಷಣೆ ಮಾಡಿ, ಆಗಿರುವ ಸಣ್ಣ ಪುಟ್ಟ ಲೋಪದೋಷ ಸರಿಪಡಿಸಿಕೊಳ್ಳಲಾಗಿದೆ. ಈ ಬಾರಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಿದ್ಧಗಂಗಾ ಮಠದ ಸ್ವಾಮೀಜಿ ಅವರಿಗೆ ಆಹ್ವಾನ ನೀಡಲಾಗಿದೆ. ಈ ವರ್ಷ 9 ದಿನ ಮಾತ್ರ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, 20 ಲಕ್ಷಕ್ಕೂ ಅಧಿಕ ಭಕ್ತಾಧಿಗಳು ಬರುವ ನಿರೀಕ್ಷೆ ಮಾಡಲಾಗಿದೆ.

ಅಂತಿಮ ಹಂತದಲ್ಲಿ ಸಿದ್ಧತೆ: ನಗರದಾದ್ಯಂತ ಅಲಂಕಾರದ ಕಾರ್ಯಗಳು ಭರದಿಂದ ನಡೆಯುತ್ತಿವೆ. ಕೆಪಿಟಿಸಿಎಲ್, ಸೆಸ್ಕಾಂ ಸಿಬ್ಬಂದಿ ನಿಗಾ ವಹಿಸಿದ್ದು, ವಿದ್ಯುತ್‌ಗಳಿಂದ ಆಗುವ ಅನಾಹುತ ತಪ್ಪಿಸಲು ಎಲ್ಲ ಅಗತ್ಯ ತಯಾರಿ ಮಾಡಿಕೊಳ್ಳಲಾಗಿದೆ. ಕಳೆದ ವರ್ಷ ವಿದ್ಯುತ್ ಅವಘಡ ಸಂಭವಿಸಿದ ಹಿನ್ನೆಲೆ ಈ ವರ್ಷ ಅಂತಹ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ.

ರಸ್ತೆಗಳ ಡಾಂಬರೀಕರಣ ಮಾಡಲಾಗಿದ್ದು, ದೇವಸ್ಥಾನದ ಒಳ ಭಾಗದಲ್ಲಿ ಅಭಿವೃದ್ಧಿ ಮಾಡಲಾಗಿದೆ. ಸರದಿ ಸಾಲಿನಲ್ಲಿ ಬರುವ ಭಕ್ತಾದಿಗಳಿಗೆ ಸಮಸ್ಯೆ ಆಗದಂತೆ ಕುಡಿಯುವ ನೀರು, ಶೌಚಾಲಯ, ಮಜ್ಜಿಗೆ ವ್ಯವಸ್ಥೆ ಮಾಡಲಾಗಿದೆ. ಇದರ ಜವಾಬ್ದಾರಿಯನ್ನು ವಿವಿಧ ಸಂಘ ಸಂಸ್ಥೆಗಳಿಗೆ ನೀಡಲಾಗಿದೆ.

ಹಾಸನದ ಹಾಸನಾಂಬ ದೇಗುಲದ ಒಳ ಆವರಣ.
ಸುಲಲಿತ ದರ್ಶನಕ್ಕೆ ಹಾಸನಾಂಬ ಆ್ಯಪ್‌ ಬಿಡುಗಡೆ ವೆಬ್‌ಸೈಟ್‌ ಮೂಲಕ ಜಾತ್ರೆಯ ಅಗತ್ಯ ಮಾಹಿತಿ ರವಾನೆ ದೇವಿಯ ದರ್ಶನದ ವೇಳೆ ಭಕ್ತರಿಗೆ ಸೌಕರ್ಯ ಒದಗಿಸಲು ಆದ್ಯತೆ
ಹೆಚ್ಚಿನ ದರ್ಶನಕ್ಕೆ ಆದ್ಯತೆ
ಧಾರ್ಮಿಕ ವಿಧಿ ವಿಧಾನಕ್ಕೆ ಧಕ್ಕೆ ಆಗದಂತೆ ಪೂಜಾ ಸಮಯ ಕಡಿತ ಮಾಡಲು ಅರ್ಚಕರನ್ನು ಕೋರಲಾಗುವುದು. ನಿತ್ಯ ಎರಡು ಗಂಟೆ ಉಳಿದರೂ 18 ಗಂಟೆ ಹೆಚ್ಚುವರಿ ಸಮಯ ಭಕ್ತರಿಗೆ ದರ್ಶನದ ಅವಕಾಶ ಕಲ್ಪಿಸಿದಂತಾಗುತ್ತದೆ. ಕೊನೆಯ ದಿನ ಕೆಲಕಾಲ ಸ್ಥಳೀಯ ಹಾಗೂ ಇತರೆ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗುವುದು. ಕೆ.ಎನ್‌. ರಾಜಣ್ಣ ಜಿಲ್ಲಾ ಉಸ್ತುವಾರಿ ಸಚಿವ 9 ದಿನ 24 ಗಂಟೆ ದರ್ಶನ ಅ.24 ಮತ್ತು ನ.3 ರಂದು ಸಾರ್ವಜನಿಕರಿಗೆ ದೇವಿ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಉಳಿದಂತೆ ಎಲ್ಲ ದಿನಗಳಲ್ಲೂ 24 ಗಂಟೆ ದೇವಿ ದರ್ಶನಕ್ಕೆ ಅವಕಾಶ ಇರುತ್ತದೆ. ಸಿ.ಸತ್ಯಭಾಮಾ ಜಿಲ್ಲಾಧಿಕಾರಿ ಅಚ್ಚುಕಟ್ಟಾಗಿ ಜಾತ್ರೆ ಕಳೆದ ಬಾರಿಯ ಅನಾನುಕೂಲತೆ ಸರಿಪಡಿಸಲು ಸಭೆ ಕರೆಯಲಾಗಿತ್ತು. ಈ ಬಾರಿ ದೊಡ್ಡ ಮಟ್ಟದಲ್ಲಿ ಜಾತ್ರೆ ಆಯೋಜನೆಗೆ ಸಿದ್ಧತೆ ಕೈಗೊಳ್ಳುತ್ತಿದ್ದು ಅಚ್ಚುಕಟ್ಟಾಗಿ ಆಯೋಜನೆಗೆ ನಿರ್ಧರಿಸಲಾಗಿದೆ. ಸ್ವರೂಪ್ ಪ್ರಕಾಶ್ ಶಾಸಕ ಅದ್ಧೂರಿ ಜಾತ್ರೆಗೆ ಅಗತ್ಯ ಸಹಕಾರ ಅದ್ದೂರಿ ಜಾತ್ರಾ ಮಹೋತ್ಸವ ನಡೆಸಲಾಗುವುದು. ಯಾವುದೇ ಲೋಪ ಆಗದಂತೆ ಮನರಂಜನೆ ಸೇರಿದಂತೆ ಧಾರ್ಮಿಕ ವಿಧಿ ವಿಧಾನಗಳು ಅಚ್ಚುಕಟ್ಟಾಗಿ ನಡೆಸಲು ನಮ್ಮ ಸಹಕಾರವೂ ಇರಲಿದೆ. ಶ್ರೇಯಸ್ ಪಟೇಲ್‌ ಸಂಸದ ಮೂಲಸೌಕರ್ಯ ಹೆಚ್ಚಿಸಿ ಪ್ರತಿ ವರ್ಷ ವಿಜೃಂಭಣೆಯಿಂದ ಹಾಸನಾಂಬ ಜಾತ್ರೆ ನಡೆಯುತ್ತಿದ್ದು ದೇವಸ್ಥಾನ ಆಡಳಿತ ಮಂಡಳಿ ಹಾಗೂ ಜಿಲ್ಲಾಡಳಿತ ದೇವಸ್ಥಾನದ ಸುತ್ತ ಹಾಗೂ ನಗರದ ಪ್ರಮುಖ ಸ್ಥಳಗಳಲ್ಲಿ ಮೂಲ ಸೌಕರ್ಯದ ಕಡೆ ಮತ್ತಷ್ಟು ಕ್ರಮ ಕೈಗೊಳ್ಳಬೇಕು. ಪಾಂಡು ಪಿ.ಎಸ್. ಖಾಸಗಿ ಉದ್ಯೋಗಿ ಚನ್ನರಾಯಪಟ್ಟಣ ಸ್ಥಳೀಯರಿಗೆ ಸುಲಭ ದರ್ಶನ ಅಗತ್ಯ ಪ್ರತಿ ವರ್ಷ ಸ್ಥಳೀಯರಿಗೆ ಹಾಸನಾಂಬ ದರ್ಶನ ಸುಲಭವಾಗಿ ಸಿಗುತ್ತಿಲ್ಲ. ಜಿಲ್ಲಾಡಳಿತ ಹಾಗೂ ದೇವಸ್ಥಾನ ಆಡಳಿತ ಮಂಡಳಿ ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು. ಉಮೇಶ್ ಕೆ.ಕೆ. ಹಾಸನದ ನಿವಾಸಿ ಮಧ್ಯದಲ್ಲಿ ದರ್ಶನ ಬಂದ್ ಮಾಡಬೇಡಿ ಬರುವ ಜನರಿಗೆ ನಿರಂತರ ದರ್ಶನ ವ್ಯವಸ್ಥೆ ಇದ್ದರೆ ಗೊಂದಲ ಆಗುವುದಿಲ್ಲ. ಅರ್ಧಗಂಟೆ ಮುಕ್ಕಾಲು ಗಂಟೆ ಬಂದ್ ಮಾಡುವುದರಿಂದ ಸಮಸ್ಯೆ ಎದುರಾಗುತ್ತಿದೆ. ಮಧ್ಯದಲ್ಲಿ ದರ್ಶನವನ್ನು ಬಂದ್‌ ಮಾಡಬಾರದು. ಶ್ರೀಧರ್ ಚನ್ನರಾಯಪಟ್ಟಣದ ಪದವಿ ವಿದ್ಯಾರ್ಥಿ
100 ಮೀಟರ್‌ಗೆ ಒಂದು ಕೌಂಟರ್‌
ಈಗಾಗಲೇ ಅಧಿಕಾರಿಗಳು ಸಿಬ್ಬಂದಿಗೆ ತರಬೇತಿ ಹಮ್ಮಿಕೊಳ್ಳಲಾಗಿದೆ. ದೇವಾಲಯದ ಪ್ರತಿ 100 ಮೀಟರ್‌ಗೆ ಒಂದು ಮ್ಯಾನೇಜ್‌ಮೆಂಟ್ ಕೌಂಟರ್ ಮಾಡಲಾಗಿದೆ ಎಂದು ಉಪ ವಿಭಾಗಾಧಿಕಾರಿ ದೇಗುಲದ ಆಡಳಿತಾಧಿಕಾರಿ ಮಾರುತಿ ತಿಳಿಸಿದ್ದಾರೆ. ಭಕ್ತಾದಿಗಳನ್ನು ಸರಿಯಾಗಿ ಕಳುಹಿಸುವುದು ಇವರ ಕೆಲಸ. ಪ್ರತಿ ಕೇಂದ್ರಕ್ಕೂ ಇಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ. ಇದನ್ನು ವೀಕ್ಷಣೆ ಮಾಡಲು ಅಧಿಕಾರಿಗಳ ನೇಮಕ ಮಾಡಲಾಗಿದೆ. ಇಲ್ಲಿ ಏನೇ ತೊಂದರೆಯಾದರೂ ವಾಕಿಟಾಕಿ ಮತ್ತು ಸಿಸಿಟಿವಿ ಕ್ಯಾಮೆರಾದಲ್ಲೂ ಮಾತನಾಡಬಹುದು. ಒಟ್ಟಿನಲ್ಲಿ ಈ ವರ್ಷವೂ ಹಾಸನಾಂಬೆ-ಸಿದ್ದೇಶ್ವರ ಸ್ವಾಮಿ ಉತ್ಸವ ಯಶಸ್ವಿಗೊಳಿಸಲು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು. 

ಸುಗಮದ ದರ್ಶನಕ್ಕೆ ಭಕ್ತರ ಸಲಹೆ

  • ದಿನದ 24 ಗಂಟೆಯೂ ದೇವಿಯ ದರ್ಶನಕ್ಕೆ ಅವಕಾಶ ನೀಡಬೇಕು.

  • ಮುಖ್ಯಮಂತ್ರಿ ಸಚಿವರು ಸೇರಿದಂತೆ ಗಣ್ಯರು ಬಂದಾಗ ಅರ್ಧ ಮುಕ್ಕಾಲು ಗಂಟೆ ದರ್ಶನ ಬಂದ್‌ ಮಾಡಬಾರದು.

  • ದೇಗುಲದಲ್ಲಿ ಯಾವುದೇ ಪೂಜೆಗಳು ನಡೆಯುತ್ತಿದ್ದರೂ ಬರುವ ಜನರಿಗೆ ನಿರಂತರ ದರ್ಶನಕ್ಕೆ ವ್ಯವಸ್ಥೆ ಇರಬೇಕು.

  • ವಿಶೇಷ ದರ್ಶನದ ಟಿಕೆಟ್‌ ಪಡೆದವರಂತೆ ಸಾಮಾನ್ಯ ದರ್ಶನಕ್ಕೆ ನಿಲ್ಲುವ ಜನರಿಗೂ ಶೀಘ್ರ ದರ್ಶನಕ್ಕೆ ವ್ಯವಸ್ಥೆ ಮಾಡಬೇಕು.

  • ಶೌಚಾಲಯಗಳ ಸ್ವಚ್ಛತೆಗೆ ಆಗಿಂದಾಗ್ಗೆ ಕ್ರಮ ಕೈಗೊಳ್ಳಬೇಕು. 

  • ಪ್ರತ್ಯೇಕ ಜಾಗ ನಿಗದಿಪಡಿಸಿ ನಿರಂತರವಾಗಿ ಪ್ರಸಾದ ವಿತರಣೆಗೆ ಕ್ರಮ ಕೈಗೊಳ್ಳಬೇಕು.

  • ದೇಗುಲಕ್ಕೆ ಹತ್ತಿರದಲ್ಲಿಯೇ ವಾಹನಗಳ ನಿಲುಗಡೆಗೆ ವ್ಯವಸ್ಥೆ ಕಲ್ಪಿಸಬೇಕು.

  • ದೇಗುಲದ ಆವರಣದಲ್ಲಿ ಅನಗತ್ಯ ವಾಹನಗಳ ಸಂಚಾರ ನಿಷೇಧಿಸಬೇಕು.

  • ಬೇಕಾಬಿಟ್ಟಿ ಪಾಸ್‌ಗಳ ವಿತರಣೆಗೆ ಕಡಿವಾಣ ಹಾಕಬೇಕು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.