ADVERTISEMENT

ಕೇರಳಾಪುರ: ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಮಂಜುನಾಥ್ ಅವಿರೋಧ ಆಯ್ಕೆ

​ಪ್ರಜಾವಾಣಿ ವಾರ್ತೆ
Published 26 ಜುಲೈ 2024, 14:13 IST
Last Updated 26 ಜುಲೈ 2024, 14:13 IST
ರಾಮನಾಥಪುರ ಹೋಬಳಿಯ ಕೇರಳಾಪುರದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಆಯ್ಕೆಯಾದ ಎನ್.ಎಸ್. ಮಂಜುನಾಥ್ ಅವರನ್ನು ಅಭಿನಂದಿಸಲಾಯಿತು
ರಾಮನಾಥಪುರ ಹೋಬಳಿಯ ಕೇರಳಾಪುರದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಆಯ್ಕೆಯಾದ ಎನ್.ಎಸ್. ಮಂಜುನಾಥ್ ಅವರನ್ನು ಅಭಿನಂದಿಸಲಾಯಿತು   

ಕೊಣನೂರು: ಸಮೀಪದ ಕೇರಳಾಪುರದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎನ್.ಎಸ್. ಮಂಜುನಾಥ್ ಅವಿರೋಧವಾಗಿ ಆಯ್ಕೆಯಾದರು.

ಸಂಘದ ಅಧ್ಯಕ್ಷ ಶಿವಣ್ಣ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಶುಕ್ರವಾರ ಸಂಘದ ಕಚೇರಿಯಲ್ಲಿ ಚುನಾವಣೆ ನಡೆಯಿತು. 12 ಸದಸ್ಯರ ಪೈಕಿ ಮಂಜುನಾಥ್ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾದರು.

ಜಿಲ್ಲಾ ಸಹಕಾರ ಸಂಘದ ನಿರ್ದೇಶಕ ಕೆ.ಸತೀಶ್, ಜಿಲ್ಲಾ ಸಹಕಾರ ಒಕ್ಕೂಟದ ಮಾಜಿ ಆಧ್ಯಕ್ಷ ಕೆ.ಟಿ.ಯೋಗಣ್ಣ, ತಾ.ಪಂ ಮಾಜಿ ಅಧ್ಯಕ್ಷ ಸಂತೋಷ್ ಗೌಡ, ಗ್ರಾ.ಪಂ ಮಾಜಿ ಅಧ್ಯಕ್ಷ ಕರೀಗೌಡ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.