ಚನ್ನರಾಯಪಟ್ಟಣ: ತಾಲ್ಲೂಕಿನ ಬಂಡಿಹಳ್ಳಿಯಲ್ಲಿ ಶನಿವಾರ ಜಮೀನು ವಿವಾದದ ಹಿನ್ನೆಲೆಯಲ್ಲಿ ದಲಿತರ ಮೇಲೆ ಹಲ್ಲೆ ಮಾಡಲಾಗಿದ್ದು, ಬೈಕ್ಗೆ ಬೆಂಕಿ ಹಚ್ಚಲಾಗಿದೆ.
ಗ್ರಾಮದ ರಂಗಪ್ಪ ಹಾಗೂ ಅವರ ಸಂಬಂಧಿ ಹಲ್ಲೆಗೆ ಒಳಗಾದವರು. ಶನಿವಾರ ಇಬ್ಬರೂ ಬೈಕ್ನಲ್ಲಿ ತೆರಳಿದ್ದರು. ಬೈಕ್ ಅನ್ನು ನಿಲ್ಲಿಸಿ, ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ, ಅಲ್ಲಿಗೆ ಬಂದ ಆರೋಪಿಗಳಾದ ಮಂಜುನಾಥ ಹಾಗೂ ಮದನ್ಕುಮಾರ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.
ಇದನ್ನು ಪ್ರಶ್ನಿಸಿದ ರಂಗಪ್ಪ ಅವರ ವಿರುದ್ಧ ಜಾತಿ ಹೆಸರಿನಲ್ಲಿ ನಿಂದನೆ ಮಾಡಿದ್ದು, ಕಲ್ಲು ತೂರಿ ಹಲ್ಲೆ ಮಾಡಿದ್ದಾರೆ. ಅಲ್ಲಿಯೇ ಇದ್ದ ರಂಗಪ್ಪ ಅವರ ಬೈಕ್ಗೂ ಬೆಂಕಿ ಹಚ್ಚಿದ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ವಿಷಯ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದರು. ಆದರೆ, ಬೈಕ್ ಬಹುತೇಕ ಸುಟ್ಟು ಹೋಗಿದೆ. ಚನ್ನರಾಯಪಟ್ಟಣ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪ್ರಕರಣ ದಾಖಲಿಸಿಕೊಂಡು, ಆರೋಪಿಗಳ ಬಂಧನಕ್ಕಾಗಿ ಶೋಧ ನಡೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.