ADVERTISEMENT

ಗ್ರಾ.ಪಂ.ಕಾರ್ಯದರ್ಶಿ ಮನೆ ಮೇಲೆ ಲೋಕಾಯುಕ್ತ ದಾಳಿ

​ಪ್ರಜಾವಾಣಿ ವಾರ್ತೆ
Published 11 ಜುಲೈ 2024, 14:30 IST
Last Updated 11 ಜುಲೈ 2024, 14:30 IST
ಬೇಲೂರು ತಾಲ್ಲೂಕಿನ ವಾಟಿಹಳ್ಳಿಯ ತೋಟದ ಮನೆಯ ಮೇಲೆ ಲೋಕಾಯುಕ್ತ ಪೊಲೀಸರು ಗುರುವಾರ ದಾಳಿ ನಡೆಸಿದರು.
ಬೇಲೂರು ತಾಲ್ಲೂಕಿನ ವಾಟಿಹಳ್ಳಿಯ ತೋಟದ ಮನೆಯ ಮೇಲೆ ಲೋಕಾಯುಕ್ತ ಪೊಲೀಸರು ಗುರುವಾರ ದಾಳಿ ನಡೆಸಿದರು.   

ಹಾಸನ: ಬೆಂಗಳೂರಿನ ದಾಸನಪುರ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಎನ್‌.ಎಂ. ಜಗದೀಶ್‌ ಅವರಿಗೆ ಸೇರಿದೆ ಎನ್ನಲಾದ ಬೇಲೂರು ತಾಲ್ಲೂಕಿನ ವಾಟಿಹಳ್ಳಿ ಗ್ರಾಮದ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ಗುರುವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಜಗದೀಶ್‌ ಅವರ ಬೆಂಗಳೂರಿನ ಹೆಸರುಘಟ್ಟದ ಅಪಾರ್ಟ್‌ಮೆಂಟ್‌ ಹಾಗೂ ವಾಟಿಹಳ್ಳಿ ಮನೆಯ ಮೇಲೆ ಏಕಕಾಲಕ್ಕೆ ದಾಳಿ ನಡೆಸಲಾಗಿದೆ.

ಜಗದೀಶ್‌ ಅವರು ಬೇಲೂರು ತಾಲ್ಲೂಕಿನ ನಂದಗೊಂಡನಹಳ್ಳಿ ಗ್ರಾಮದವರಾಗಿದ್ದು, ವಾಟಿಹಳ್ಳಿ ಬಳಿ ಜಮೀನು ಹಾಗೂ ತೋಟದ ಮನೆ ಹೊಂದಿದ್ದಾರೆ.

ADVERTISEMENT

ಲೋಕಾಯುಕ್ತ ಎಸ್ಪಿ ಮಲ್ಲಿಕ್ ಮಾರ್ಗದರ್ಶನದಲ್ಲಿ, ಡಿವೈಎಸ್ಪಿ ತಿರುಮಲಮೇಶ್, ಇನ್‌ಸ್ಪೆಕ್ಟರ್‌ಗಳಾದ ಬಾಲು, ಶಿಲ್ಪಾ ಹಾಗೂ ಚಿಕ್ಕಮಗಳೂರಿನ ಅಧಿಕಾರಿಗಳು ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೂ ದಾಖಲೆಗಳ ಪರಿಶೀಲನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.