ಕೊಣನೂರು: ಕೊಣನೂರು ಮತ್ತು ರಾಮನಾಥಪುರ ವ್ಯಾಪ್ತಿಯಲ್ಲಿ ಶುಕ್ರವಾರ ಗುಡುಗು ಸಹಿತ ಮಳೆ ಸುರಿಯಿತು. ಗಾಳಿಯು ಜೋರಾಗಿ ಬೀಸುತ್ತಿದ್ದರಿಂದ ಅಲ್ಲಲ್ಲಿ ಮರಗಳು ಉರುಳಿ ಕೆಲವೆಡೆ ವಿದ್ಯುತ್ ವ್ಯತ್ಯಯ ಉಂಟಾಯಿತು.
ಹಾರಂಗಿ ಅಣೆಕಟ್ಟೆಯಿಂದ ಕಾವೇರಿ ನದಿಗೆ ಹೆಚ್ಚಿನ ನೀರನ್ನು ಬಿಟ್ಟಿರುವುದರಿಂದ ನದಿ ಪಾತ್ರದ ತಗ್ಗಿನ ಕೃಷಿ ಭೂಮಿಗಳಿಗೆ ನೀರು ನುಗ್ಗಿದೆ. ಕೊಡಗಿನ ಗಡಿಭಾಗದ ತರಿಗಳಲೆ ಗ್ರಾಮ ಪಂಚಾಯಿತಿ ಭಾಗದಲ್ಲಿ ಮರಗಳು ವಿದ್ಯುತ್ ತಂತಿ ಮೇಲೆ ಬೀಳುತ್ತಿರುವುದರಿಂದ ಅಲ್ಲಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.