ರಾಣೆಬೆನ್ನೂರು: ಇಲ್ಲಿನ ವಿನಾಯಕ ನಗರ ಕೆ.ಬಿ. ಕೋಳಿವಾಡ ಸಭಾಭವನದಲ್ಲಿ ಜೂನ್ 18ರಂದು ಬೆಳಿಗ್ಗೆ 10.30ಕ್ಕೆ ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆ ಕುರಿತು ಕಾಂಗ್ರೆಸ್ ಕಾರ್ಯಕರ್ತರ ಆತ್ಮಾವಲೋಕನ ಸಭೆಯನ್ನು ಆಯೋಜಿಸಲಾಗಿದೆ.
ಶಾಸಕ ಪ್ರಕಾಶ್ ಕೋಳಿವಾಡ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಪರಾಜಿತ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ, ಮಾಜಿ ಸಚಿವ ಆರ್.ಶಂಕರ್ ಹಾಗೂ ತಾಲ್ಲೂಕಿನ ಕಾಂಗ್ರೆಸ್ ಮುಖಂಡರು ಭಾಗವಹಿಸಲಿದ್ದಾರೆ ಎಂದು ತಾಲ್ಲೂಕು ಗ್ರಾಮೀಣ ಘಟಕದ ಅಧ್ಯಕ್ಷ ಮಂಜನಗೌಡ ಪಾಟೀಲ ಹಾಗೂ ನಗರ ಘಟಕದ ಅಧ್ಯಕ್ಷ ಶೇರ್ಖಾನ್ ಕಾಬೂಲಿ ಪ್ರಕಟಣೆಗೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.