ಸವಣೂರು: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ನಿತ್ಯ ವಿಭಿನ್ನ ರೀತಿಯ ಕುತಂತ್ರ, ಷಡ್ಯಂತರ, ಸಿಡಿ ಪ್ರಕರಣಗಳಲ್ಲಿ ಮುಳುಗಿ ರಾಜ್ಯವನ್ನು ಹಾಳು ಮಾಡಿದೆ ಎಂದು ಮಾಜಿ ಶಾಸಕ ಅಮೃತ ದೇಸಾಯಿ ಆರೋಪಿಸಿದರು.
ಬಿಜೆಪಿ ಸವಣೂರು ಶಹರ ಮಂಡಳದ ಉಸ್ತುವಾರಿಯಾಗಿ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
20 ವರ್ಷಗಳ ಹಿಂದೆ ಕಾಂಗ್ರೆಸ್ ಭದ್ರಕೋಟೆಯಂತಿರುವ ಶಿಗ್ಗಾವಿ-ಸವಣೂರು ಕ್ಷೇತ್ರದಲ್ಲಿ ನಿರಂತರವಾಗಿ 4 ಭಾರಿ ಬಿಜೆಪಿಯನ್ನು ಗೆಲ್ಲಿಸುವ ಮೂಲಕ ರಾಜ್ಯಕ್ಕೆ ಮುಖ್ಯಮಂತ್ರಿಯನ್ನು ನೀಡಿದ ಕ್ಷೇತ್ರವಾಗಿದೆ. ರಾಜ್ಯದ ಜನತೆಯ ಚಿತ್ತ ಶಿಗ್ಗಾವಿ ಕ್ಷೇತ್ರದ ಮೇಲಿದೆ. ಕಾಂಗ್ರೆಸ್ನಲ್ಲಿ ಹಲವಾರು ಗೊಂದಲಗಳಿವೆ. ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ. ಆದ್ದರಿಂದ, ಉಪ ಚುನಾವಣೆಯಲ್ಲಿ ಹೆಚ್ಚಿನ ಮತಗಳ ಅಂತರದಲ್ಲಿ ಗೆಲ್ಲುವ ಮೂಲಕ ಕಾಂಗ್ರೆಸ್ ಸರ್ಕಾರಕ್ಕೆ ದಿಟ್ಟ ಉತ್ತರವನ್ನು ನೀಡಬೇಕು’ ಎಂದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುನಾಥ ಗಾಣಿಗೇರ, ಧಾರವಾಡ ಕೆಎಂಎಫ್ ಅಧ್ಯಕ್ಷ ಶಂಕರ ಮುಗದ, ಕೆಸಿಸಿ ಬ್ಯಾಂಕ್ ನಿರ್ದೇಶಕ ಸುಭಾಸ ಗಡೆಪ್ಪನವರ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಬಿ.ಎಂ.ಪಾಟೀಲ, ಪುರಸಭೆ ಮಾಜಿ ಅಧ್ಯಕ್ಷರಾದ ಶೈಲಾ ಮುದಿಗೌಡ್ರ, ರಾಜೇಶ್ವರಿ ಬುಶೆಟ್ಟಿ, ಸವಣೂರು ಶಕ್ತಿ ಕೇಂದ್ರದ ಪ್ರಮೂಕ ಚನ್ನಬಸಯ್ಯ ದುರ್ಗದಮಠ, ಪದಾಧಿಕಾರಿಗಳಾದ ಶಂಕರ ಪಾಟೀಲ, ಮುರಳಿದರ ಶೇಂಡಗೆ, ಮಹದೇವ ಮಹೇಂದ್ರಕರ, ಶ್ರೀಕಾಂತ ಲಕ್ಷ್ಮೇಶ್ವರ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.