ADVERTISEMENT

ಬ್ಯಾಡಗಿ: ವಿಷ ಸೇವಿಸಿ ರೈತ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 13 ಜೂನ್ 2024, 16:13 IST
Last Updated 13 ಜೂನ್ 2024, 16:13 IST
   

ಬ್ಯಾಡಗಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಲ್ಲೂಕಿನ ತಿಪಲಾಪುರ ಗ್ರಾಮದ ರೈತ ಅಶೋಕ ಭೀಮಪ್ಪ ಓಲೇಕಾರ (45) ಚಿಕಿತ್ಸೆಗೆ ಸ್ಪಂದಿಸದೆ ಹುಬ್ಬಳ್ಳಿ ಕಿಮ್ಸ್‌ನಲ್ಲಿ ಗುರುವಾರ ಮೃತಪಟ್ಟಿದ್ದಾರೆ.

ಈ ಹಿಂದೆ ಸ್‌ಬಿಐ ಶಾಖೆಯಲ್ಲಿ ₹3 ಲಕ್ಷ ಬೆಳೆ ಸಾಲ ಮಾಡಿಕೊಂಡಿದ್ದರು. ಕಳೆದ ವರ್ಷ ಮಳೆಯಾಗದೆ ಸಾಕಷ್ಟು ಹಾನಿ ಅನುಭವಿಸಿದ್ದರು. ಸಾಲ ತೀರಿಸಿವುದು ಹೇಗೆ ಎನ್ನುವ ಚಿಂತೆಯಲ್ಲಿ ಜೂನ್‌ 7ರಂದು ಮನೆಯಲ್ಲಿ ವಿಷ ಸೇವಿಸಿದ್ದರು. ಚಿಕಿತ್ಸೆ್ಗಾಗಿ ಹಾವೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಕಿಮ್ಸ್‌ಗೆ ಕರೆದೊಯ್ಯಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಕಾಗಿನೆಲೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT