ADVERTISEMENT

Haveri Accident: ತಲಾ‌ ₹ 10 ಲಕ್ಷ‌ ಪರಿಹಾರಕ್ಕೆ ಸಂಬಂಧಿಕರ ಆಗ್ರಹ

​ಪ್ರಜಾವಾಣಿ ವಾರ್ತೆ
Published 28 ಜೂನ್ 2024, 6:39 IST
Last Updated 28 ಜೂನ್ 2024, 6:39 IST

ಹಾವೇರಿ: ಅಪಘಾತದಲ್ಲಿ ಮೃತಪಟ್ಟ 13 ಮಂದಿಯ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರ ನೀಡಬೇಕು ಎಂದು ಸಂಬಂಧಿಕರು ಆಗ್ರಹಿಸುತ್ತಿದ್ದಾರೆ.

ಹಾವೇರಿ‌ ಜಿಲ್ಲಾಸ್ಪತ್ರೆ ಎದುರು ಸೇರಿರುವ ಸಂಬಂಧಿಕರು ಹಾಗೂ ಸ್ಥಳೀಯರು, ಲಾರಿ ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ. ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸುತ್ತಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಭದ್ರಾವತಿ ತಾಲೂಕು ಮರಾಠ ಸಮಾಜದ ಅಧ್ಯಕ್ಷರೂ ಅಗಿರುವ ವಕೀಲ ಲೋಕೇಶ, ಪರಿಹಾರ ಘೋಷಿಸುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.

ADVERTISEMENT

ಮೃತರ ಕುಟುಂಬದವರಿಗೆ ತಲಾ ಹತ್ತು ಲಕ್ಷ ಪರಿಹಾರ ನೀಡಬೇಕು. ಇಲ್ಲದಿದ್ದಲ್ಲಿ ಶವಾಗಾರದ ಎದುರು ಮೃತದೇಹವಿಟ್ಟು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.