ADVERTISEMENT

ಹಾವೇರಿ ಅಪಘಾತ |ಮೃತರ ಕುಟುಂಬಕ್ಕೆ ತಲಾ ₹50 ಸಾವಿರ ಪರಿಹಾರ ನೀಡಿದ ಶಿವಾನಂದ ಪಾಟೀಲ

​ಪ್ರಜಾವಾಣಿ ವಾರ್ತೆ
Published 28 ಜೂನ್ 2024, 7:57 IST
Last Updated 28 ಜೂನ್ 2024, 7:57 IST
   

ಹಾವೇರಿ: ಜಿಲ್ಲೆಯ ಗುಂಡನಹಳ್ಳಿ ಕ್ರಾಸ್ ಬಳಿ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಗಳ ಕುಟುಂಬಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅವರು ತಲಾ ₹ 50 ಸಾವಿರ ವೈಯಕ್ತಿಕವಾಗಿ ಪರಿಹಾರ ನೀಡಿದ್ದಾರೆ.

ಜಿಲ್ಲಾಸ್ಪತ್ರೆಯಲ್ಲಿ ಮೃತರ ಕುಟುಂಬದವರನ್ನು ಭೇಟಿಯಾದ ಸಚಿವರ ಬೆಂಬಲಿಗರು, ನಗದು ನೀಡಿದರು. ಸರ್ಕಾರದಿಂದ ಹೆಚ್ಚಿನ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದರು.

ಹಿನ್ನೆಲೆ:

ADVERTISEMENT

ಹಾವೇರಿ ಸಮೀಪದ ಗುಂಡನಹಳ್ಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ನಸುಕಿನಲ್ಲಿ ಅಪಘಾತ ಸಂಭವಿಸಿದ್ದು, 13 ಮಂದಿ ಮೃತಪಟ್ಟಿದ್ದಾರೆ. ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

ವಾಹನದಲ್ಲಿದ್ದ ಚಾಲಕ ಸೇರಿ ನಾಲ್ವರು ಪುರುಷರು, ಏಳು ಜನ ಮಹಿಳೆಯರು ಸೇರಿ 13 ಮಂದಿ ಮೃತಪಟ್ಟಿದ್ದಾರೆ. ಶವಗಳನ್ನು ಹಾವೇರಿಯ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ. ಮೃತರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಬಳಿಯ ಎಮ್ಮೆ ಹಟ್ಟಿ ಗ್ರಾಮದವರನ್ನು ಎಂದು ತಿಳಿದು ಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.