ADVERTISEMENT

ಹಾವೇರಿ: ಹಾವು ಕಚ್ಚಿ ಮಹಿಳೆ ಸಾವು

​ಪ್ರಜಾವಾಣಿ ವಾರ್ತೆ
Published 11 ಜುಲೈ 2024, 15:41 IST
Last Updated 11 ಜುಲೈ 2024, 15:41 IST
   

ಹಾವೇರಿ: ಜಮೀನಿನಲ್ಲಿ ಕಳೆ ತೆಗೆಯುವ ಸಂದರ್ಭದಲ್ಲಿ ಹಾವು ಕಚ್ಚಿ ನಾಗವೇಣಿ ದುಂಡಪ್ಪ ಗಂಜೀಗಟ್ಟಿ (53) ಎಂಬುವವರು ಮೃತಪಟ್ಟಿದ್ದು, ಆಡೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಹಾನಗಲ್ ತಾಲ್ಲೂಕಿನ ಮಾರನಬೀಡದ ನಾಗವೇಣಿ, ತಮ್ಮ ಜಮೀನಿನಲ್ಲಿ ಬೆಳೆಯಲ್ಲಿ ಹೆಚ್ಚಾಗಿದ್ದ ಕಳೆ ತೆಗೆಯುತ್ತಿದ್ದ ಸಂದರ್ಭದಲ್ಲಿ ಹಾವು ಕಚ್ಚಿತ್ತು. ಇದರಿಂದ ತೀವ್ರ ಅಸ್ವಸ್ಥಗೊಂಡು ಅಸುನೀಗಿದ್ದಾರೆ’ ಎಂದು ಪೊಲೀಸರು ಹೇಳಿದರು.

‘ಜುಲೈ 9ರಂದು ಮಧ್ಯಾಹ್ನ ನಾಗವೇಣಿ ಅವರಿಗೆ ಹಾವು ಕಚ್ಚಿತ್ತು. ತೀವ್ರ ಅಸ್ವಸ್ಥಗೊಂಡಿದ್ದ ಅವರನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಅವರು ಜುಲೈ 10ರಂದು ಬೆಳಿಗ್ಗೆ ಮೃತಪಟ್ಟಿದ್ದಾರೆ. ಅವರ ಮಗ ಪ್ರವೀಣ ನೀಡಿರುವ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.