ADVERTISEMENT

ಶಿಗ್ಗಾವಿ ಉಪ ಚುನಾವಣೆ: ಹುಲಗೂರಲ್ಲಿ ಸಚಿವ ಜಮೀರ್ ಅಹ್ಮದ್‌ ಕಾರಿಗೆ ಕಲ್ಲೇಟು!

ಸಚಿವ ಜಮೀರ್ ಅಹ್ಮದ್ ಖಾನ್ ಅವರ ಕಾರಿನ‌ ಮೇಲೆ ಕೆಲ ಕಾರ್ಯಕರ್ತರು ಹುಲಗೂರಿನಲ್ಲಿ ಕಲ್ಲು ತೂರಾಟ ನಡೆಸಿದ್ದಾರೆ.

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2024, 10:42 IST
Last Updated 25 ಅಕ್ಟೋಬರ್ 2024, 10:42 IST
<div class="paragraphs"><p>ಸಚಿವ ಜಮೀರ್ ಕಾರಿಗೆ ಶಿಗ್ಗಾವಿ ಕಲ್ಲೇಟು</p></div>

ಸಚಿವ ಜಮೀರ್ ಕಾರಿಗೆ ಶಿಗ್ಗಾವಿ ಕಲ್ಲೇಟು

   

ಹಾವೇರಿ: ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಮುಖಂಡರ ನಡುವೆ ತಿಕ್ಕಾಟ ಶುರುವಾಗಿದ್ದು, ಸಚಿವ ಜಮೀರ್ ಅಹ್ಮದ್ ಖಾನ್ ಅವರ ಕಾರಿನ‌ ಮೇಲೆ ಕೆಲ ಕಾರ್ಯಕರ್ತರು ಹುಲಗೂರಿನಲ್ಲಿ ಕಲ್ಲು ತೂರಾಟ ನಡೆಸಿದ್ದಾರೆ.

ಪಕ್ಷೇತರಾಗಿ ನಾಮಪತ್ರ ಸಲ್ಲಿಸಿರುವ ಸೈಯದ್ ಅಜ್ಜಂಪೀರ್ ಖಾದ್ರಿ ಅವರ ಮನವೋಲಿಸಲು ಜಮೀರ್ ಅಹ್ಮದ್ ಅವರು ಮನೆಗೆ ಹೋಗಿದ್ದರು. ಇದೇ ಸಂದರ್ಭದಲ್ಲಿ ಅವರು ಅಭ್ಯರ್ಥಿ ಯಾಸೀರ್ ಅಹ್ಮದ್ ಖಾನ್ ಅವರ ಕಾರಿನಲ್ಲಿ ಹೋಗಿದ್ದರು.

ADVERTISEMENT

ಟಿಕೆಟ್ ಕೈ ತಪ್ಪಿದ್ದರಿಂದ ಆಕ್ರೋಶಗೊಂಡಿರುವ ಸೈಯದ್ ಖಾದ್ರಿ ಪರ ಬೆಂಬಲಿಗರು, ಕಾರಿನ ಮೇಲೆ ಏಕಾಏಕಿ ಕಲ್ಲು ತೂರಾಟ ನಡೆಸಿದ್ದಾರೆ. ಸ್ಥಳೀಯ ಮುಖಂಡರೇ ಜಮೀರ್ ಅವರನ್ನು ಪಾರು ಮಾಡಿ ವಾಪಸು ಕಳುಹಿಸಿದ್ದಾರೆ‌.

ಟಿಕೆಟ್ ಹಂಚಿಕೆ ವಿಚಾರವಾಗಿ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನವಿತ್ತು. ಈಗ ಅದು ಗಂಭೀರ ಸ್ವರೂಪ ಪಡೆದುಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.