ಬ್ಯಾಡಗಿ: ತಾಲ್ಲೂಕಿನ 166 ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ವಿತರಣಾ ಕಾರ್ಯಕ್ರಮ ಸೋಮವಾರ ಬೆಳಿಗ್ಗೆ 11 ಗಂಟೆಗೆ ಪಟ್ಟಣದ ತಾಲ್ಲೂಕು ಪಂಚಾಯ್ತಿ ಆವರಣದಲ್ಲಿ ನಡೆಯಲಿದೆ.
ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಬಸವರಾಜ ಶಿವಣ್ಣನವರ ಬೆಳಿಗ್ಗೆ 10.30ಕ್ಕೆ ವನಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬಳಿಕ ಎಸ್ಜೆಜೆಎಂ ಪಬ್ಲಿಕ್ ಶಾಲಾ ಆವರಣದಲ್ಲಿ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸುವರು. ತದನಂತರ ಪುರಸಭೆ ಆವಣದಲ್ಲಿ ಆಯೋಜಿಸಿರುವ ಬೀದಿ ಬದಿ ವ್ಯಾಪಾರಿಗಳಿಗೆ ಆತ್ಮನಿರ್ಭರ ನಿಧಿ ಯೋಜನೆಯಡಿ ಸಮೃದ್ಧಿಮೇಳದಲ್ಲಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.