ರಾಣೆಬೆನ್ನೂರು: ಇಲ್ಲಿನ ಸಿದ್ದೇಶ್ವರ ಗ್ರಾಮೀಣ ವಸತಿ ಪ್ರೌಢಶಾಲೆ ಆವರಣದಲ್ಲಿ ಜ. 17 ರಂದು ಬೆಳಿಗ್ಗೆ 10:30 ಗಂಟೆಗೆ, 2022 23ನೇ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಉಚಿತ ಪರೀಕ್ಷಾ ಪೂರ್ವ ಸಿದ್ಧತಾ ತರಬೇತಿ ಕಾರ್ಯಗಾರ ನಡೆಯಲಿದೆ.
ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ, ಕರವೇ ಕನ್ನಡ ಸೇನೆ, ಮತ್ತು ಶ್ರೀ ಸಿದ್ದೇಶ್ವರ ಗ್ರಾಮೀಣ ವಸತಿ ಪ್ರೌಢ ಶಾಲೆ ಸಹಯೋಗದಲ್ಲಿ ಕಾರ್ಯಾಗಾರ ನಡೆಯಲಿದೆ. ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಹೆಚ್. ಪಾಟೀಲ್ ಉದ್ಘಾಟಿಸುವರು, ವಸತಿ ಪ್ರೌಢಶಾಲಾ ಸಮಿತಿಯ ಅಧ್ಯಕ್ಷ ರಾಯಣ್ಣ ಮಾಕನೂರು ಅಧ್ಯಕ್ಷತೆ ವಹಿಸುವರು.
ದಾವಣಗೆರೆ ಕಲಾಾ ಕುಂಚ ಸಾಂಸ್ಕೃತಿಕ ಸಂಸ್ಥೆಯ ಅಧ್ಯಕ್ಷ ಗಣೇಶ್ ಶೆಣೈ ಅವರು ಪರೀಕ್ಷಾ ಪೂರ್ವ ಸಿದ್ಧತೆ ಕುರಿತು ಉಪನ್ಯಾಸ ನೀಡುವರು.
ಮುಖ್ಯ ಅತಿಥಿಗಳಾಗಿ, ಕನ್ನಡ ಸೇನೆ ಅಧ್ಯಕ್ಷ ಪರಮೇಶ್ವರಯ್ಯ ಮಠದ, ಪ್ರೌಢಶಾಲಾ ಮುಖ್ಯೋಪಾಧ್ಯಾಯ ಪ್ರಶಾಂತ್ ಮಾಸಣಗಿ, ಬಸವರಾಜ ಬಾಗೇವಾಡಿಮಠ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.