ರಟ್ಟೀಹಳ್ಳಿ: ತಳಮಟ್ಟದ ಕರಕುಶಲ ವೃತ್ತಿಗಳನ್ನು ಗುರುತಿಸಿ ಉತ್ತೇಜಿಸುವ ಅಂಗವಾಗಿ ವಿಶ್ವಕರ್ಮ ಯೋಜನೆಯ ತರಬೇತಿ ಸಹಾಯವಾಗಲಿದೆ ಎಂದು ಉಪಸಭಾಪತಿ ರುದ್ರಪ್ಪ ಲಮಾಣಿ ಹೇಳಿದರು.
ತಾಲ್ಲೂಕಿನ ತಿಪ್ಪಾಯಿಕೊಪ್ಪದಲ್ಲಿ ಗುರುಮೂಕಪ್ಪ ಶಿವಯೋಗಿಗಳ ಮಠದಲ್ಲಿ ಮಂಗಳವಾರ ಆಯೋಜಿಸಿದ್ದ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ವೃತ್ತಿ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಮಠದ ಮಹಾಂತ ಸ್ವಾಮೀಜಿ, ಜಿಲ್ಲಾ ಕೌಶಲ್ಯಾಧಿಕಾರಿ ಸಂಜಯ ಕೋರೆ, ಕಾಲೇಜು ಪ್ರಾಚಾರ್ಯ ಎಸ್.ಪಿ. ಗೌಡರ, ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಮಹಾಂತೇಶ ಸೊಪ್ಪಿನ, ತರಬೇತಿದಾರೆ ಗೀತಾ ಕರಿಗಾರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.