ADVERTISEMENT

ಕಮಲಾಪುರ | ಅಪಘಾತ: ಇಬ್ಬರು ಸಾವು

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2024, 8:29 IST
Last Updated 26 ಫೆಬ್ರುವರಿ 2024, 8:29 IST
<div class="paragraphs"><p>ಸಾಂಕೇತಿಕ ಚಿತ್ರ</p></div>

ಸಾಂಕೇತಿಕ ಚಿತ್ರ

   

ಕಮಲಾಪುರ: ಕಲಬುರಗಿ ತಾಲ್ಲೂಕಿನ ಅವರಾದ (ಬಿ) ಸಮೀಪ ರಸ್ತೆ ಬದಿಯಲ್ಲಿ ನಿಂತ ಲಾರಿಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ನಡೆದಿದೆ.

ಕಲಬುರಗಿ ತಾಲ್ಲೂಕಿನ ಬೆಲೂರ (ಜೆ) ನಿವಾಸಿಗಳಾದ ಗುರುನಾಥ ತಿಮ್ಮಣ್ಣ (45) ಮತ್ತು ಅವರ ಅಕ್ಕನ ಮಗಳು ಸಂಗೀತಾ ಶಂಕರ (32) ಮೃತಪಟ್ಟಿದ್ದಾರೆ. ಲಕ್ಷ್ಮಣ ಭೀಮಶಾ (35) ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲ್ಲೂಕಿನ ಯಳಂಬಿ ಗ್ರಾಮದಲ್ಲಿ ನಡೆಯಲಿದ್ದ ಮದುವೆ ಸಮಾರಂಭದಲ್ಲಿ ಭಾಗವಹಿಸಲು ಬೈಕ್ ಮೂಲಕ ತೆರಳುತ್ತಿದ್ದರು. ಮಾರ್ಗ ಮಧ್ಯದಲ್ಲಿ ಅಪಘಾತ ಸಂಭವಿಸಿದೆ.

ಕಲಬುರಗಿ ಸಂಚಾರ ಪೊಲೀಸ್ ಠಾಣೆ- 2ರಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.