ಚಿತ್ತಾಪುರ: ಪಟ್ಟಣದ ಬಸ್ ನಿಲ್ದಾಣದ ಸಮೀಪ ಬೆಳಗ್ಗೆ ವಾಕಿಂಗ್ ಮಾಡುತ್ತಿದ್ದಾಗ ವೇಗವಾಗಿ ಬಂದ ಮಹಿಂದ್ರಾ ಕಂಪೆನಿಯ ಗೂಡ್ಸ್ ವಾಹನ ಡಿಕ್ಕಿ ಹೊಡೆದು ಮಹಿಳೆ ಮೃತಪಟ್ಟು, ಮೂವರಿಗೆ ಗಾಯವಾಗಿರುವ ಘಟನೆ ಭಾನುವಾರ ಜರುಗಿದೆ.
ಪಟ್ಟಣದ ಇಂದಿರಾ ನಗರದ ತೇಜಮ್ಮ ಸಿದ್ದಣ್ಣ (60) ಮೃತಪಟ್ಟವರು. ಸಂತೋಷ ನಗರದ ಚಂದ್ರಭಾಗಮ್ಮ ಅಣ್ಣಪ್ಪ (58), ಲಕ್ಷ್ಮಿ ರೇವಪ್ಪ ಪೊಲೀಸ್ ಪಾಟೀಲ (40), ಅಂಬೇಡ್ಕರ್ ನಗರದ ಮಹಾದೇವ ಮರೆಪ್ಪ ಕಟ್ಟಿಮನಿ (58) ಗಾಯಗೊಂಡಿದ್ದಾರೆ.
ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ತೇಜಮ್ಮ ಅವರನ್ನು ಚಿಕಿತ್ಸೆಗಾಗಿ ಕಲಬುರಗಿ ನಗರದ ಯುನೈಟೆಡ್ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಪರೀಕ್ಷಿಸಿದ ವೈದ್ಯರು ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ. ಘಟನೆಯ ಸುದ್ಧಿ ತಿಳಿಯುತ್ತಿದ್ದಂತೆ ಪಿಎಸ್ಐ ಶ್ರೀಶೈಲ್ ಅಂಬಾಟಿ ಅವರು ಸಿಬ್ಬಂದಿಯೊಂದಿಗೆ ಘಟನಾ ಸ್ಥಳಕ್ಕೆ ದೌಡಾಯಿಸಿ ಪರಿಶೀಲಿಸಿದ್ದಾರೆ.
ಕಲಗುರ್ತಿ ಗ್ರಾಮದ ಗೂಡ್ಸ್ ವಾಹನ ಚಾಲಕ ಮತ್ತು ಮಾಲೀಕರಾದ ಮಂಜುನಾಥ ಶಾಮರಾವ ಪೊಲೀಸ್ ಪಾಟೀಲ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.