ಸೇಡಂ: ನಕಲಿ ಪಿಸ್ತೂಲ್ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಫೋಟೊ ಹರಿಬಿಟ್ಟ ಇಬ್ಬರು ಯುವಕರ ವಿರುದ್ಧ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಟ್ಟಣದ ಇಂದಿರಾನಗರ ನಿವಾಸಿಗಳಾದ ಮಹೇಶ ಕಾಶಿನಾಥ ಮತ್ತು ಬಸವರಾಜ ಜಗನ್ನಾಥ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ. ನಕಲಿ ಪಿಸ್ತೂಲ್ ಪ್ರದರ್ಶಿಸಿ ಸಮಾಜದಲ್ಲಿ ಶಾಂತಿ ಕದಡಿಸುವ ಪ್ರಯತ್ನವನ್ನು ಮಾಡಿರುವ ಅಂಶ ಬೆಳಕಿಗೆ ಬಂದಿದೆ. ಇದರ ಕುರಿತು ಭಾವಚಿತ್ರಗಳನ್ನು ಗಮನಿಸಿದಾಗ ಸೇಡಂ ಪಟ್ಟಣದವರಾಗಿದ್ದಾರೆ.
ನಕಲಿ ಪಿಸ್ತೂಲ್ ಜತೆಗೆ ಮಾರಾಕಾಸ್ತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿ, ಶಾಂತಿ ಕದಡಿಸುವ ಪ್ರಯತ್ನ ಮಾಡಿರುವುದು ಕಂಡು ಬಂದಿದ್ದು, ಇದಕ್ಕೆ ಸಾರ್ವಜನಿಕರಿಂದಲೂ ಆಕ್ಷೇಪಗಳು ಕೇಳಿ ಬಂದಿವೆ. ಹೀಗಾಗಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪಿಎಸ್ಐ ತಿರುಮಲೇಶ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.