ADVERTISEMENT

ಕಲಬುರಗಿಯಲ್ಲಿ ಭಾರಿ ಮಳೆ ಸಾಧ್ಯತೆ |ಮುಂಜಾಗ್ರತೆ ವಹಿಸಿ: ಪ್ರಿಯಾಂಕ್ ಖರ್ಗೆ ಮನವಿ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2024, 4:31 IST
Last Updated 2 ಸೆಪ್ಟೆಂಬರ್ 2024, 4:31 IST
ಪ್ರಿಯಾಂಕ್ ಖರ್ಗೆ
ಪ್ರಿಯಾಂಕ್ ಖರ್ಗೆ   

ಕಲಬುರಗಿ: ಜಿಲ್ಲಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಸೆಪ್ಟೆಂಬರ್ 2 ಮತ್ತು 3ರವರೆಗೆ ಯಲ್ಲೋ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಮುಂಜಾಗ್ರತೆ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಮನವಿ ಮಾಡಿದ್ದಾರೆ.

ವ್ಯಾಪಕ ಮಳೆಯಾಗುವ ಕಾರಣ ಗ್ರಾಮದಲ್ಲಿನ ಕೆರೆ, ಹಳ್ಳ, ನದಿಗೆ ಹೆಚ್ಚಿನ ಪ್ರಮಾಣದ ನೀರು ಹರಿದು ಬರುವ ಸಾಧ್ಯತೆ ಇದೆ. ಜಾನುವಾರುಗಳಿಗೆ ನೀರು ಕುಡಿಸಲು ಹೊಳೆಯ ಸಮೀಪ ತೆಗೆದುಕೊಂಡು ಹೋಗಬಾರದು. ಸಾರ್ವಜನಿಕರು ಸಹ ನದಿ, ಹಳ್ಳಗಳತ್ತ ಸುಳಿಯಬಾರದು ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ರೈತರು ತಮ್ಮ ಬೆಳೆಗಳಿಗೆ ಕೀಟನಾಶಕ ಸಿಂಪರಣೆ ಮುಂದೂಡಬೇಕು. ಹೆಸರು, ಉದ್ದಿನ ಬೆಳೆಗಳು ಕಟಾವಿಗೆ ಬಂದಿರುವ ಕಾರಣ ಬೇಗನೆ ಕಟಾವು ಮಾಡಬಹುದಾಗಿದೆ. ಹೊಲ-ಗದ್ದೆಗಳಲ್ಲಿ ಹೆಚ್ಚಿನ ನೀರು ನಿಂತು ಬೆಳೆ ಹಾನಿಯಾಗುವ ಸಂಭವವಿದೆ ಎಂದಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.