ADVERTISEMENT

ಚಿತ್ತಾಪುರ | ಲೋಕಾಯುಕ್ತ ಅಧಿಕಾರಿಯಿಂದ ಅಹವಾಲು ಸ್ವೀಕಾರ ನಾಳೆ

​ಪ್ರಜಾವಾಣಿ ವಾರ್ತೆ
Published 12 ಜೂನ್ 2024, 15:46 IST
Last Updated 12 ಜೂನ್ 2024, 15:46 IST

ಚಿತ್ತಾಪುರ: ‘ಕರ್ನಾಟಕ ಲೋಕಾಯುಕ್ತ ಕಲಬುರಗಿ ಜಿಲ್ಲಾ ವರಿಷ್ಠಾಧಿಕಾರಿಯು  ಜೂ 13ರಂದು ಬೆಳಿಗ್ಗೆ 11 ಗಂಟೆಯಿಂದ ಪಟ್ಟಣದಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ’ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನೀಲಗಂಗಾ ಬಬಲಾದ ತಿಳಿಸಿದ್ದಾರೆ.

‘ತಾಲ್ಲೂಕಿನ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಂಡು, ತಮ್ಮ ಸಮಸ್ಯೆ, ಕೆಲಸ ಕಾರ್ಯಗಳ ಕುರಿತು ಖುದ್ದಾಗಿ ಅಹವಾಲು, ದೂರು, ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ’ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT