ಅಫಜಲಪುರ: ತಾಲ್ಲೂಕಿನ ಬಡದಾಳ ಗ್ರಾಮದ ಇಬ್ಬರು ರೈತರು ಅಫಜಲಪುರದಿಂದ ಬಿತ್ತನೆ ಬೀಜ ಖರೀದಿ ಮಾಡಿ ಮೋಟಾರ್ ಬೈಕ್ ಮೇಲೆ ಮರಳಿ ಗ್ರಾಮಕ್ಕೆ ಹೋಗುತ್ತಿರುವಾಗ ಬಳ್ಳೂರಗಿ- ಬಡದಾಳ ರಸ್ತೆ ಮಧ್ಯೆ ಎದುರಿಗೆ ಬಂದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮೃತ ಇಬ್ಬರೂ ಬಡದಾಳ ಗ್ರಾಮದವರಾಗಿದ್ದು, ಸುರೇಶ ನೀಲಂಗೆ(45) ಅಲ್ಲಾವುದ್ದಿನ್ ಆವೇರಿ (55) ಎಂದು ಗುರುತಿಸಲಾಗಿದೆ. ಈ ಕುರಿತು ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.