ADVERTISEMENT

ಜೆಡಿಯುನವರು ಇಂಡಿಯಾ ಒಕ್ಕೂಟ ಬಿಡುವ ಬಗ್ಗೆ ತಿಳಿಸಿಲ್ಲ: ಮಲ್ಲಿಕಾರ್ಜುನ ಖರ್ಗೆ

​ಪ್ರಜಾವಾಣಿ ವಾರ್ತೆ
Published 27 ಜನವರಿ 2024, 8:01 IST
Last Updated 27 ಜನವರಿ 2024, 8:01 IST
ಮಲ್ಲಿಕಾರ್ಜುನ ಖರ್ಗೆ 
ಮಲ್ಲಿಕಾರ್ಜುನ ಖರ್ಗೆ    

ಕಲಬುರಗಿ: ಜೆಡಿಯುನವರು 'ಇಂಡಿಯಾ' ಒಕ್ಕೂಟವನ್ನು ಬಿಡುವ ಬಗ್ಗೆ ನಮಗೆ ಯಾವ ಮಾಹಿತಿ ನೀಡಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದರು.

ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಉಳಿಯಬೇಕು ಎಂಬುದು ನಮ್ಮ ಅಪೇಕ್ಷೆ. ಹೀಗಾಗಿ, ಎಲ್ಲ ಪಕ್ಷಗಳೂ ಒಗ್ಗಟ್ಟಾಗಿರಬೇಕು ಎಂದರು.

ನಾಳೆ (ಭಾನುವಾರ) ಡೆಹ್ರಾಡೂನ್ ನಲ್ಲಿ ಪಕ್ಷದ ಸಭೆ ನಡೆಯಲಿದೆ‌. ಅದಾದ ಬಳಿಕ ದೆಹಲಿಗೆ ತೆರಳಿ ವಿದ್ಯಮಾನಗಳ ಬಗ್ಗೆ ಮಾಹಿತಿ ಪಡೆಯುವೆ ಎಂದು ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.