ADVERTISEMENT

ಕಾಂಗ್ರೆಸ್‌ಗೆ ರವಿ ಬಿರಾದಾರ ರಾಜೀನಾಮೆ

​ಪ್ರಜಾವಾಣಿ ವಾರ್ತೆ
Published 10 ಮೇ 2024, 15:56 IST
Last Updated 10 ಮೇ 2024, 15:56 IST
ರವಿ ಬಿರಾದಾರ
ರವಿ ಬಿರಾದಾರ   

ಕಲಬುರಗಿ: ಕಮಲಾಪುರದ ಯುವ ಮುಖಂಡ ರವಿ ಬಿರಾದಾರ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ ಅವರಿಗೆ ಶುಕ್ರವಾರ ಸಲ್ಲಿಸಿದರು. 

‘ವೈಯಕ್ತಿಕ ಕಾರಣಗಳಿಗಾಗಿ ಪಕ್ಷಕ್ಕೆ ರಾಜೀನಾಮೆ ಸಲ್ಲಿಸುತ್ತೇನೆ’ ಎಂದು ಪತ್ರದಲ್ಲಿ ತಿಳಿಸಿದ್ದಾರೆ. 

ಕಮಲಾಪುರ ಕ್ಷೇತ್ರದ ಸ್ಥಳೀಯ ಕಾಂಗ್ರೆಸ್ ಮುಖಂಡರ ವರ್ತನೆಯಿಂದಾಗಿ ಬೇಸತ್ತು ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. 

ADVERTISEMENT

ವಿಧಾನಸಭೆ ಚುನಾವಣೆಗೂ ಮುನ್ನ ರವಿ ಬಿರಾದಾರ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.