ಶಹಾಬಾದ್: ಜಿಲ್ಲಾಡಳಿತ, ಜಿಲ್ಲಾ ನಗರಾಭಿವೃದ್ಧಿ ಕೋಶ ಹಾಗೂ ಜಿಲ್ಲಾ ಸ್ವೀಪ್ ಸಮಿತಿ, ನಗರಸಭೆ ಮತ್ತು ತಾಲ್ಲೂಲು ಸ್ವೀಪ್ ಸಮಿತಿ ಸಹಯೋಗದಲ್ಲಿ ನಗರದಲ್ಲಿ ಮತದಾನ ಜಾಗೃತಿ ಜಾಥಾ ಜರುಗಿತು.
‘ನಮ್ಮ ನಡೆ ಮತದಾನದ ಕಡೆ’ ಎಂಬ ಘೋಷಣೆಯೊಂದಿಗೆ ಭಾನುವಾರ ನಗರ ಪ್ರಮುಖ ಬೀದಿಗಳಲ್ಲಿ ಎತ್ತಿನ ಬಂಡಿ, ಡೊಳ್ಳು ಬಾರಿಸುವ ಮೂಲಕ ಪಾದಯಾತ್ರೆ ಮಾಡಿ ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಪೌರಾಯುಕ್ತ ಕೆ.ಗುರುಲಿಂಗಪ್ಪ, ತಾ.ಪಂ ಇಒ ಮಲ್ಲಿನಾಥ ರಾವೂರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಡಾ. ವಿಜಯಲಕ್ಷ್ಮೀ ಹೇರೂರ, ನಗರಸಭೆ ಅಧಿಕಾರಿಗಳಾದ ಶರಣಗೌಡ ಪಾಟೀಲ, ರಘುನಾಥ ನರಸಾಳೆ, ಸಿದ್ದಪ್ಪಾ ಸೋಂಪೂರ, ರಬ್ಬಾನಿ ಜೆ.ಇ, ಶಿವಕುಮಾರ ಜೇಟ್ಟೂರ, ಅನಿಲಕುಮಾರ ಮಾನ್ಪಡೆ, ಸಂತೋಷ, ಈರಣ್ಣ ಸಾತ್ಕೇಡ, ಶಿವರಾಜ ಇರಳ್ಳಿ ಸೇರಿದಂತೆ ನಗರಸಭೆ ಸಿಬ್ಬಂದಿ, ಪೌರಕಾರ್ಮಿಕರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಿಬ್ಬಂದಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.