ಅಫಜಲಪುರ: ತಾಲ್ಲೂಕಿನ ಮಾಶಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ರಾಮನಗರದಲ್ಲಿ ಶಿವಾನಂದ ಕಾಶಿರಾಯ ಬೊರುಟಿ ಎಂಬುವವರಿಗೆ ಸೇರಿದ ಪಾನ್ ಶಾಪ್ನಲ್ಲಿನ ₹ 7 ಸಾವಿರ ನಗದು ಹಾಗೂ ವಸ್ತುಗಳನ್ನು ಭಾನುವಾರ ಕಳ್ಳರು ದೋಚಿಕೊಂಡು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ರಾತ್ರಿ ಎರಡು ಗಂಟೆಗೆ ಪಾನ್ ಶಾಪ್ ಶೆಟರ್ ಬೀಗ ಒಡೆದು ಅದರಲ್ಲಿರುವ ನೋಟು, ಸಿಗರೇಟ್ ಪ್ಯಾಕೆಟ್ ಮತ್ತು ಗುಟ್ಕಾ ಪ್ಯಾಕೆಟ್, ನೀರಿನ ಬಾಟಲಿಗಳು ದೋಚಿಕೊಂಡು ಹೋಗಿದ್ದಾರೆ. ಈ ಕುರಿತು ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.