ಕಲಬುರಗಿ: ‘ಯುಗಾದಿ ಹಬ್ಬದ ಪ್ರಯುಕ್ತ ಶ್ರೀಶೈಲಕ್ಕೆ ತರಳುವ ಭಕ್ತರ ಅನುಕೂಲಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ವಿಭಾಗ-1ರ ವತಿಯಿಂದ ಏ.11ರವರೆಗೆ ಘಟಕ-1 ಮತ್ತು 4, ಚಿಂಚೋಳಿ, ಚಿತ್ತಾಪುರ, ಕಾಳಗಿ ಹಾಗೂ ಸೇಡಂ ಘಟಕಗಳಿಂದ ವಿಶೇಷ ಬಸ್ಗಳು ಸಂಚರಿಸಲಿವೆ’ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.
ತಾಲ್ಲೂಕು ಕೇಂದ್ರ ಹಾಗೂ ಗ್ರಾಮಗಳಿಂದ ನೇರವಾಗಿ 45 ರಿಂದ 50 ಜನರು ಒಂದಾಗಿ ಶ್ರೀಶೈಲಕ್ಕೆ ಪ್ರಯಾಣಿಸಲು ಸಿದ್ಧರಿದ್ದರೆ ಆಯಾ ಸ್ಥಳಕ್ಕೆ ವಾಹನಗಳ ಸಾರಿಗೆ ಸೌಕರ್ಯ ಕಲ್ಪಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗೆ ವಿಭಾಗೀಯ ಸಾರಿಗೆ ಅಧಿಕಾರಿ–7760992102, ಕಲಬುರಗಿ ಘಟಕ-1ರ ಘಟಕ ವ್ಯವಸ್ಥಾಪಕ 7760992113, ಘಟಕ-4ರ ವ್ಯವಸ್ಥಾಪಕ-7022012103, ಚಿಂಚೋಳಿ-7760992117, ಚಿತ್ತಾಪುರ–7760992119, ಕಾಳಗಿ–7760992120, ಸೇಡಂ-7760992466 ಸಂಪರ್ಕಿಸಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.