ADVERTISEMENT

ವಾಡಿ | ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ: ಕೊಲೆ ಶಂಕೆ

​ಪ್ರಜಾವಾಣಿ ವಾರ್ತೆ
Published 4 ಮೇ 2024, 16:19 IST
Last Updated 4 ಮೇ 2024, 16:19 IST
ಅವದೇಶ ಮಿಶ್ರಾ
ಅವದೇಶ ಮಿಶ್ರಾ   

ವಾಡಿ: ಚಿತ್ತಾಪುರ ತಾಲ್ಲೂಕಿನ ಲಾಡ್ಲಾಪುರ ಗ್ರಾಮದ ಹೊರವಲಯದಲ್ಲಿ ಶನಿವಾರ ಬೆಳಿಗ್ಗೆ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ.

ಗ್ರಾಮಸ್ಥರ ಮಾಹಿತಿ ಬಳಿಕ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯ ಪಖೆರಿ ಗ್ರಾಮದ ಅವದೇಶ ಮಿಶ್ರಾ(42) ಎಂದು ಗುರುತಿಸಲಾಗಿದೆ.

‘ಮೃತ ವ್ಯಕ್ತಿ 10 ವರ್ಷಗಳಿಂದ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ. ಸೋಮವಾರ ಬೆಂಗಳೂರು-ಗೋರಖಪುರ ರೈಲಿನಲ್ಲಿ ತನ್ನ ಸ್ವಗ್ರಾಮಕ್ಕೆ ಹೊರಟಿದ್ದ. ಲಾಡ್ಲಾಪುರ ಹತ್ತಿರ ಶವ ಪತ್ತೆಯಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು ವಾಸನೆ ಬಿರುತ್ತಿದ್ದರಿಂದ ವ್ಯಕ್ತಿ 4-5 ದಿನಗಳ ಹಿಂದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಬೆನ್ನು, ಕೈಕಾಲು ಮೇಲೆ ಗಾಯದ ಗುರುತುಗಳು ಇದ್ದು, ಕಾಲುಗಳು ಕೊಳೆತು ಹೋಗಿವೆ.

ಮೃತನ ಸಹೋದರ ರಮೇಶ ರಮಾನಂದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.