ADVERTISEMENT

ಶನಿವಾರಸಂತೆಯಲ್ಲಿ 7 ಮಂದಿಗೆ ನಾಯಿ ಕಡಿತ

​ಪ್ರಜಾವಾಣಿ ವಾರ್ತೆ
Published 15 ಜೂನ್ 2024, 7:17 IST
Last Updated 15 ಜೂನ್ 2024, 7:17 IST

ಶನಿವಾರಸಂತೆ: ಪಟ್ಟಣದಲ್ಲಿ ಕಳೆದ 3 ದಿನಗಳಿಂದ 7 ಮಂದಿಗೆ ನಾಯಿಗಳು ಕಚ್ಚಿದ್ದು, ಆತಂಕ ಮೂಡಿಸಿದೆ.

ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತ, ತ್ಯಾಗರಾಜ ಕಾಲೊನಿ, ಬಿದರೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ನಾಯಿಗಳ ಕಡಿತ ಪ್ರಕರಣಗಳು ಹೆಚ್ಚುತ್ತಿವೆ. ನಾಯಿ ಕಡಿತಕ್ಕೆ ಒಳಗಾದವರು ಶನಿವಾರಸಂತೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು, ಸೋಮವಾರಪೇಟೆ ಹಾಗೂ ಹಾಸನದ ಅರಕಲಗೂಡು ತಾಲ್ಲೂಕು ಆಸ್ಪತ್ರೆಗಳಲ್ಲಿ ಹೆಚ್ಚಿನ ಚಿಕಿತ್ಸೆ ಪಡೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT