ADVERTISEMENT

ಅಪಘಾತ: ಬೈಕ್ ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 1 ಜೂನ್ 2024, 4:36 IST
Last Updated 1 ಜೂನ್ 2024, 4:36 IST

ಕುಶಾಲನಗರ: ಸಮೀಪದ ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಸುಂದರನಗರ ಗ್ರಾಮದಲ್ಲಿ ಶುಕ್ರವಾರ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟಿದ್ದಾರೆ.

ಚಿಕ್ಕತ್ತೂರು ಗ್ರಾಮದ ಮಹಾದೇವ್ ಎಂಬುವವರ ಪುತ್ರ ಶಿವಶಂಕರ್ (22) ಮೃತಪಟ್ಟವರು. ಶಿವಶಂಕರ್ ತನ್ನ ಬೈಕ್‌ನಲ್ಲಿ ಮನೆಗೆ ತೆರಳುತ್ತಿರುವ ವೇಳೆ ಮುಂಭಾಗದಲ್ಲಿ ಚಲಿಸುತ್ತಿದ್ದ ಟ್ರ್ಯಾಕ್ಟರ್‌ಗೆ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದ ಪರಿಣಾಮ ತಲೆಯ ಭಾಗಕ್ಕೆ ಗಂಭೀರವಾದ ಗಾಯ ಉಂಟಾಗಿ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಗ್ರಾಮಾಂತರ ಸಂಚಾರ ಪೊಲೀಸ್ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದರು. ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT