ಸುಂಟಿಕೊಪ್ಪ: ಸಮೀಪದ ಬೋಯಿಕೇರಿಯಲ್ಲಿ ನೆಲೆಗೊಂಡಿರುವ ಸಿದ್ಧಿ ಬುದ್ಧಿ ವಿನಾಯಕ ದೇವಾಲಯದ ಎಂಟನೇ ವರ್ಷದ ಪ್ರತಿಷ್ಠಾಪನಾ ವಾರ್ಷಿಕೋತ್ಸವವು ಸೋಮವಾರ ವಿಜ್ರಂಭಣೆಯಿಂದ ನಡೆಯಿತು.
ಬೆಳಿಗ್ಗೆ ಸ್ಥಳ ಶುದ್ದಿ, ಪುತ್ಸಾಹ ವಾಚನ, ನವಕಲಶ ಪೂಜೆ, 108 ತೆಂಗಿನ ಕಾಯಿಯ ಮಹಾಗಣಪತಿ ಹೋಮ ನಡೆಯಿತು.
ಮಧ್ಯಾಹ್ನ ಮಹಾಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನೆರವೇರಿದ ನಂತರ ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
ಮಡಿಕೇರಿ, ಕೆದಕಲ್, ಬೋಯಿಕೇರಿ, ಹಾಲೇರಿ ಸೇರಿದಂತೆ ವಿವಿಧೆಡೆಯಿಂದ ಭಕ್ತರು ಆಗಮಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.