ADVERTISEMENT

ಭಕ್ತರ ನಂಬಿಕೆಯಂತೆ ತಲಕಾವೇರಿಯಲ್ಲಿ 'ಕಾವೇರಿ ಪವಿತ್ರ ತೀರ್ಥೋದ್ಭವ'

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2024, 2:39 IST
Last Updated 17 ಅಕ್ಟೋಬರ್ 2024, 2:39 IST
<div class="paragraphs"><p>ತೀರ್ಥೋದ್ಭವ ಸ್ಥಳದಲ್ಲಿ ಜನಸಂದಣಿ</p></div>

ತೀರ್ಥೋದ್ಭವ ಸ್ಥಳದಲ್ಲಿ ಜನಸಂದಣಿ

   

– ಪ್ರಜಾವಾಣಿ ವಿಡಿಯೊ

ಮಡಿಕೇರಿ: ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಗುರುವಾರ ಬೆಳಿಗ್ಗೆ 7.40ಕ್ಕೆ ಕಾವೇರಿ ಪವಿತ್ರ ತೀರ್ಥೋದ್ಭವವಾಯಿತು ಎಂದು ಅರ್ಚಕರು ಘೋಷಿಸುತ್ತಿದ್ದಂತೆ ಹರ್ಷೋದ್ಘಾರಗಳು ಮುಗಿಲು ಮುಟ್ಟಿದವು.

ADVERTISEMENT

ತೀರ್ಥವನ್ನು ಸುತ್ತಲೂ ಸೇರಿದ್ದ ಭಕ್ತರ ಮೇಲೆ ಅರ್ಚಕರು ಸಿಂಪಡಿಸುತ್ತಿದ್ದಂತೆ ಭಕ್ತರೆಲ್ಲರೂ ಕೈಮುಗಿದರು. ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಅಪಾರ ಜನಸ್ತೋಮ ತೀರ್ಥ ತುಂಬಿಸಿಕೊಳ್ಳಲು ಮುಗಿಬಿದ್ದರು.

ಇದಕ್ಕೂ ಮುನ್ನ ಅಪಾರ ಸಂಖ್ಯೆಯಲ್ಲಿ ಭಕ್ತ ವೃಂದ ಭಾಗಮಂಡಲದಿಂದ ಕಾಲ್ನಡಿಗೆಯಲ್ಲಿ ತಲಕಾವೇರಿಯವರೆಗೂ ಬಂದರು. ಭಾಗಮಂಡಲದಿಂದ ತಲಕಾವೇರಿಯವರೆಗೂ ಉಚಿತ ಕೆಎಸ್‌ಆರ್‌ಟಿಸಿ ಬಸ್‌ ಪ್ರಯಾಣ ಕಲ್ಪಿಸಲಾಗಿತ್ತು. ಬುಧವಾರ ರಾತ್ರಿ ಇಡಿ ಕ್ಷೇತ್ರದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.