ADVERTISEMENT

ಕಾಡಾನೆ ದಾಳಿ; ಮಹಿಳೆ ಸಾವು

​ಪ್ರಜಾವಾಣಿ ವಾರ್ತೆ
Published 9 ಜುಲೈ 2024, 6:09 IST
Last Updated 9 ಜುಲೈ 2024, 6:09 IST

ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ಚೆನ್ನಂಗಿ ಬಳಿಯ ಅಬ್ಬೂರಿನ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಅಸ್ಸಾಂನ ಅಜಬಾನು (37) ಎಂಬುವವರು ಬುಧವಾರ ಮಧ್ಯಾಹ್ನ ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟರು.

‘ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಪಾಲಿಬೆಟ್ಟದ ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜನವಾಗಲಿಲ್ಲ. ನಾಗರಹೊಳೆ ಅರಣ್ಯ ಇಲ್ಲಿಗೆ ಕೇವಲ 2 ಕಿ.ಮೀ ಇದೆ. ಅಲ್ಲಿಂದ ಬಂದಿರುವ ಆನೆಯನ್ನು ನಿರಂತರವಾಗಿ ಕಾಡಿಗೆ ಓಡಿಸಿದರೂ ಮತ್ತೆಮತ್ತೆ ವಾಪಸ್ ಬರುತ್ತಿದೆ’ ಎಂದು ವಿರಾಜಪೇಟೆ ವಲಯದ ಡಿಸಿಎಫ್ ಶರಣ ಬಸಪ್ಪ ‘ಪ್ರಜಾವಾಣಿ’ಗೆ ತಿಳಿಸಿದರು.

ಆಸ್ಪತ್ರೆ ಮುಂದೆ ಜಮಾಯಿಸಿದ ಸ್ಥಳೀಯರು ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.