ವಿರಾಜಪೇಟೆ (ಕೊಡಗು ಜಿಲ್ಲೆ): ತಾಲ್ಲೂಕಿನ ಗ್ರಾಮವೊಂದರಲ್ಲಿ 15 ವರ್ಷದ ಬಾಲಕ ತನ್ನ 48 ವರ್ಷ ಅಜ್ಜಿಯ ಮೇಲೆ ಹಲ್ಲೆ ನಡೆಸಿದ್ದು, ಅವರು ಸ್ಥಳದಲ್ಲೇ ಮೃತಪಟ್ಟರು.
‘ಬಾಲಕನ ತಂದೆ, ತಾಯಿ ಬೇರೆಡೆ ವಾಸವಿದ್ದರು. ಬಾಲಕ ತನ್ನ ತಾತ, ಅಜ್ಜಿಯ ಮನೆಯಲ್ಲಿದ್ದು, ವಯಸ್ಸಾದರೂ ಅಡುಗೆ ಮಾಡಿ ಹಾಕಬೇಕಾ ಎಂದು ಅಜ್ಜಿ ಹೇಳಿದ್ದಕ್ಕೆ ಕೋಪಗೊಂಡು ದೊಣ್ಣೆಯಿಂದ ಹೊಡೆದಿದ್ದ. ತೀವ್ರವಾಗಿ ಗಾಯಗೊಂಡ ಅಜ್ಜಿ ಮೃತಪಟ್ಟರು’ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.