ಮಡಿಕೇರಿ: ನಗರ ಮತ್ತು ತಾಲ್ಲೂಕು ವ್ಯಾಪ್ತಿಯಲ್ಲಿ ಸುರಿಯುತ್ತಿರುವ ಭಾರಿ ಮಳೆ ಬುಧವಾರ ರಾತ್ರಿ ಹೊತ್ತಿಗೆ ಮತ್ತಷ್ಟು ಬಿರುಸು ಪಡೆದಿದೆ. ಇದರಿಂದ ಮಡಿಕೇರಿ ತಾಲ್ಲೂಕು ವ್ಯಾಪ್ತಿಯ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜೂನ್ 27ರಂದು ರಜೆ ಘೋಷಣೆ ಮಾಡಿ ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ ಆದೇಶ ಹೊರಡಿಸಿದ್ದಾರೆ.
ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಅವರು, ‘ಮಳೆಯ ಬಿರುಸು ಕಡಿಮೆಯಾಗಿಲ್ಲ. ಜಿಲ್ಲಾಧಿಕಾರಿ ಹಾಗೂ ಶಾಸಕರು ರಜೆ ಘೋಷಿಸುವಂತೆ ಹೇಳಿದರು. ಪರಿಸ್ಥಿತಿಯನ್ನು ಪರಾಮರ್ಶಿಸಿ ಒಂದು ದಿನದ ಮಟ್ಟಿಗೆ ರಜೆ ಘೋಷಣೆ ಮಾಡಲಾಗಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.