ಮಡಿಕೇರಿ: ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಬಿಜೆಪಿ ಕಾರ್ಯಕರ್ತರಿಗೆ ಪೊಲೀಸರಿಂದ ಮಾನಸಿಕ ಕಿರುಕುಳ ಹೆಚ್ಚಾಗುತ್ತಿದೆ. ಇದರ ವಿರುದ್ಧ ಬಿಜೆಪಿಯಿಂದ ಹೋರಾಟ ನಡೆಸಬೇಕಾಗುತ್ತದೆ ಎಂದು ಬಿಜೆಪಿ ಮುಖಂಡ ಕೆ.ಜಿ ಬೋಪ್ಪಯ್ಯ ಎಚ್ಚರಿಕೆ ನೀಡಿದರು.
‘ನಮ್ಮ ಕಾರ್ಯಕರ್ತರು ಪೇಸ್ ಬುಕ್ ಖಾತೆಯಲ್ಲಿ ಮಾಡಿದ ಕೆಲವು ಪೋಸ್ಟ್ಗಳ ಕುರಿತು ಪೊಲೀಸರು ಠಾಣೆಗೆ ಕರೆಸಿ ಮುಚ್ಚಳಿಕೆ ಬರೆಸಿಕೊಳ್ಳುವ ಮೂಲಕ ಮಾನಸಿಕ ಕಿರುಕುಳ ನೀಡಿದ್ದಾರೆ’ ಎಂದು ಅವರು ಇಲ್ಲಿ ಭಾನುವಾರ ಆರೋಪಿಸಿದರು.
‘ಕಾಂಗ್ರೆಸ್ ಕಾರ್ಯಕರ್ತರೂ ಬಿಜೆಪಿ ವಿರುದ್ಧ ಹಾಕಿದ್ದ ಪೋಸ್ಟ್ಗಳ ಕುರಿತು ಏಕೆ ಮುಚ್ಚಳಿಕೆ ಬರೆಸಿಕೊಂಡಿಲ್ಲ’ ಎಂದು ಪ್ರಶ್ನಿಸಿದ ಅವರು, ‘ಈ ರೀತಿ ಬರೆಸಿಕೊಳ್ಳುತ್ತಾ ಹೋದರೆ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿದಂತೆ ಎಲ್ಲ ಕಾಂಗ್ರೆಸ್ ನಾಯಕರಿಂದಲೂ ಬರೆಸಿಕೊಳ್ಳಬೇಕಾಗುತ್ತದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.