ADVERTISEMENT

ಸೋಮವಾರಪೇಟೆ: ಮುನೇಶ್ವರ ಸ್ವಾಮಿ 7ನೇ ವಾರ್ಷಿಕ ಮಹಾಪೂಜೆ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2024, 6:05 IST
Last Updated 21 ಏಪ್ರಿಲ್ 2024, 6:05 IST
ಸೋಮವಾರಪೇಟೆ ಮಹದೇಶ್ವರ ಬ್ಲಾಕ್ ಮಹದೇಶ್ವರ ಭಕ್ತವೃಂದದ ವತಿಯಿಂದ ಶನಿವಾರ ಮುನೇಶ್ವರ ಸ್ವಾಮಿ ಮತ್ತು ಚಾಮುಂಡೇಶ್ವರಿ ಅಮ್ಮನವರ 7ನೇ ವಾರ್ಷಿಕ ಮಹಾಪೂಜೆ ನಡೆಯಿತು
ಸೋಮವಾರಪೇಟೆ ಮಹದೇಶ್ವರ ಬ್ಲಾಕ್ ಮಹದೇಶ್ವರ ಭಕ್ತವೃಂದದ ವತಿಯಿಂದ ಶನಿವಾರ ಮುನೇಶ್ವರ ಸ್ವಾಮಿ ಮತ್ತು ಚಾಮುಂಡೇಶ್ವರಿ ಅಮ್ಮನವರ 7ನೇ ವಾರ್ಷಿಕ ಮಹಾಪೂಜೆ ನಡೆಯಿತು   

ಸೋಮವಾರಪೇಟೆ: ಇಲ್ಲಿನ ಮಹದೇಶ್ವರ ಬ್ಲಾಕ್‌ನ ಮಹದೇಶ್ವರ ಭಕ್ತವೃಂದದ ವತಿಯಿಂದ ಶನಿವಾರ ಮುನೇಶ್ವರ ಸ್ವಾಮಿ ಮತ್ತು ಚಾಮುಂಡೇಶ್ವರಿ ಅಮ್ಮನವರ 7ನೇ ವಾರ್ಷಿಕ ಮಹಾಪೂಜೆ ನಡೆಯಿತು.

ಅರ್ಚಕ ಜಗದೀಶ್ ಉಡುಪ ಅವರ ನೇತೃತ್ವದಲ್ಲಿ ಬೆಳಿಗ್ಗೆ 8ಕ್ಕೆ ಮಹಾಗಣಪತಿ ಹೋಮ, 10ಕ್ಕೆ ದುರ್ಗಾ ಹೋಮ ಹಾಗೂ ಕಳಸ ಪ್ರತಿಷ್ಠಾಪನೆ, 11-30ಕ್ಕೆ ನವಕ ಕಳಸ ಪ್ರತಿಷ್ಠಾಪನೆ, ಕಳಶಾಭಿಷೇಕ, ಸಂಜೆ 5ಕ್ಕೆ ಪಂಚ ದುರ್ಗಾದೀಪ ನಮಸ್ಕಾರ, 7-30ಕ್ಕೆ ಮಹಾ ಮಂಗಳಾರತಿ ಮತ್ತು ಪ್ರಸಾದ ವಿನಿಯೋಗ ನಡೆಯಿತು. ಪೂಜಾ ಸಂದರ್ಭ ಸಮಿತಿ ಅಧ್ಯಕ್ಷ ಸುರೇಶ್ ಬಾಬು, ಗೌರವಾಧ್ಯಕ್ಷ ಡಿ.ಕೆ. ದೊರೆ, ಕಾರ್ಯದರ್ಶಿ ವಿ.ಸಿ. ಲೋಕೇಶ್, ಪ್ರಮುಖರಾದ ಬಿ.ಬಿ. ಮೋಹನ್, ಎನ್.ಪಿ. ಗೋವಿಂದ, ಆರ್.ಸಿ. ಅಣ್ಣಪ್ಪ, ತಿಮ್ಮಶೆಟ್ಟಿ ಇದ್ದರು.

ಸೋಮವಾರಪೇಟೆ ಮಹದೇಶ್ವರ ಬ್ಲಾಕ್ ಶ್ರೀ ಮಹದೇಶ್ವರ ಭಕ್ತವೃಂದದ ವತಿಯಿಂದ ಶನಿವಾರ ಶ್ರೀ ಮುನೇಶ್ವರ ಸ್ವಾಮಿ ಮತ್ತು ಶ್ರೀ ಚಾಮುಂಡೇಶ್ವರಿ ಅಮ್ಮನವರ 7ನೇ ವಾರ್ಷಿಕ ಮಹಾಪೂಜೆ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT