ADVERTISEMENT

ಊಟದ ವಿಚಾರಕ್ಕೆ ತಗಾದೆ: ನಿಂತುಹೋದ ಮದುವೆ

ಸೋಮವಾರ‍ಪೇಟೆ ತಾಲ್ಲೂಕಿನ ವಧುವಿಗೂ, ತುಮಕೂರು ಜಿಲ್ಲೆಯ ವರನಿಗೂ ನಿಶ್ಚಯವಾಗಿದ್ದ ವಿವಾಹ

​ಪ್ರಜಾವಾಣಿ ವಾರ್ತೆ
Published 6 ಮೇ 2024, 4:56 IST
Last Updated 6 ಮೇ 2024, 4:56 IST
ಸೋಮವಾರಪೇಟೆ ಪೊಲೀಸ್ ಠಾಣೆ ಎದುರು ವಧು ಮತ್ತು ವರನ ಕಡೆಯುವರು ಪೊಲೀಸರ ಸಮ್ಮುಖದಲ್ಲಿ ಚರ್ಚೆಯಲ್ಲಿ ತೊಡಗಿರುವುದು
ಸೋಮವಾರಪೇಟೆ ಪೊಲೀಸ್ ಠಾಣೆ ಎದುರು ವಧು ಮತ್ತು ವರನ ಕಡೆಯುವರು ಪೊಲೀಸರ ಸಮ್ಮುಖದಲ್ಲಿ ಚರ್ಚೆಯಲ್ಲಿ ತೊಡಗಿರುವುದು   

ಪ್ರಜಾವಾಣಿ ವಾರ್ತೆ

ಸೋಮವಾರಪೇಟೆ (ಕೊಡಗು ಜಿಲ್ಲೆ): ಮದುವೆ ಹಿಂದಿನ ದಿನ ಸಿಹಿತಿಂಡಿ ನೀಡಿಲ್ಲ ಎಂಬ ಕಾರಣಕ್ಕೆ ಮದುವೆಯನ್ನೇ ರದ್ದುಗೊಳಿಸಿದ ಘಟನೆ ಪಟ್ಟಣದ ಕಲ್ಯಾಣ ಮಂಟಪವೊಂದರಲ್ಲಿ ಭಾನುವಾರ ನಡೆದಿದೆ.

ತಾಲ್ಲೂಕಿನ ಯುವತಿಯೊಬ್ಬರ ವಿವಾಹವು ತುಮಕೂರು ಜಿಲ್ಲೆಯ ಯುವಕನೊಂದಿಗೆ ಇಲ್ಲಿನ ಕಲ್ಯಾಣಮಂಟಪದಲ್ಲಿ ನಡೆಯಬೇಕಿತ್ತು. ಶನಿವಾರ ಸಂಜೆ ತುಮಕೂರಿನಿಂದ ವರನ ಕಡೆಯವರು ಮಂಟಪಕ್ಕೆ ಬಂದಿದ್ದು, ರಾತ್ರಿಯ ಊಟದಲ್ಲಿ ಸಿಹಿತಿಂಡಿ ಇಲ್ಲ ಎಂಬ ಕಾರಣಕ್ಕೆ ವಿಚಾರಕ್ಕೆ ಗಲಾಟೆ ಆರಂಭವಾಯಿತು. ಮಂಟಪದಲ್ಲಿಯೇ ಮಾತಿನ ಚಕಮಕಿ, ತಳ್ಳಾಟ ನೂಕಾಟ ನಡೆಯಿತು. ಭಾನುವಾರ ಬೆಳಿಗ್ಗೆ ಅಂತಿಮವಾಗಿ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿತು. 

ADVERTISEMENT

ಶನಿವಾರ ರಾತ್ರಿ ಮದುವೆಯೇ ಬೇಡ ಎಂದು ಉಂಗುರ ಕಳಚಿಕೊಟ್ಟಿದ್ದ ವರ, ಮತ್ತೆ ‘ನಾನು ಮದುವೆಯಾಗುತ್ತೇನೆ’ ಎಂದು ಹೇಳಿದ್ದು, ಈ ಘಟನಾವಳಿಗಳಿಂದ ಬೇಸರಗೊಂಡ ವಧು ಮದುವೆಯೇ ಬೇಡ ಎಂದು ಪೊಲೀಸರೆದುರು ಹೇಳಿಕೆ ನೀಡಿದಳು.

ಮದುವೆಗೆಂದು ಖರ್ಚು ಮಾಡಿರುವ ಹಣವನ್ನು ವರನ ಕಡೆಯವರು ನೀಡಬೇಕೆಂದು ವಧುವಿನ ಕಡೆಯವರು ಠಾಣೆ ಎದುರು ಆಗ್ರಹಿಸಿದರು. ಅಂತಿಮವಾಗಿ ಹಣಕಾಸಿನ ವಿಚಾರವನ್ನು ನೀವುಗಳೇ ಬಗೆಹರಿಸಿಕೊಳ್ಳಿ ಎಂದು ಸಲಹೆ ನೀಡಿ, ಪೊಲೀಸರು ಪ್ರಕರಣಕ್ಕೆ ಇತಿಶ್ರೀ ಹಾಡಿದರು.

ಈ ಕುರಿತು ಪೊಲೀಸ್ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.