ಮಡಿಕೇರಿ: ನಗರದಲ್ಲಿ ಶನಿವಾರ ಮಧ್ಯಾಹ್ನ ಬಿರುಸಿನ ಮಳೆ ಸುರಿದು, ಚಳಿಯ ವಾತಾವರಣ ಸೃಷ್ಟಿಯಾಯಿತು.
ಸುಮಾರು ಎರಡು ಗಂಟೆಗಳ ಕಾಲ ಸುರಿದ ಭಾರಿ ಮಳೆಗೆ ನಗರದ ರಸ್ತೆಗಳಲ್ಲಿ ನೀರು ಕಾಲುವೆಯಂತೆ ಹರಿಯಿತು.
ಬತ್ತಿದ್ದ ಸಣ್ಣ ಸಣ್ಣ ತೊರೆಗಳಲ್ಲಿ ನೀರು ರಭಸವಾಗಿ ಹರಿಯಿತು.
ಓಂಕಾರೇಶ್ವರ ದೇವಸ್ಥಾನದ ಸಮೀಪದ ರಸ್ತೆಯಲ್ಲಿ ನೀರು ಹೆಚ್ಚು ರಭಸವಾಗಿ ಹರಿಯಿತು. ಜಿಲ್ಲಾಸ್ಪತ್ರೆ ಹಿಂಭಾಗ ಹಾಕಿದ್ದ ತ್ಯಾಜ್ಯ ಕೊಚ್ಚಿಕೊಂಡು ರಸ್ತೆಗೆ ಬಂದಿತು. ಮಳೆ ಮುಂದುವರಿದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.