ADVERTISEMENT

ಆನೆಕಾಡು | ವಾಹನ ಡಿಕ್ಕಿ: ಜಿಂಕೆ ಸಾವು

​ಪ್ರಜಾವಾಣಿ ವಾರ್ತೆ
Published 14 ಜೂನ್ 2024, 7:24 IST
Last Updated 14 ಜೂನ್ 2024, 7:24 IST
   

ಕುಶಾಲನಗರ: ಇಲ್ಲಿಗೆ ಸಮೀಪದ ಆನೆಕಾಡು ಮೀಸಲು ಅರಣ್ಯ ವ್ಯಾಪ್ತಿಯಲ್ಲಿ ರಸ್ತೆ ದಾಟುತ್ತಿದ್ದ ಜಿಂಕೆಯೊಂದು ಶುಕ್ರವಾರ ಕಾರೊಂದಕ್ಕೆ ಸಿಲುಕಿ ಮೃತಪಟ್ಟಿದೆ.

ಇಲ್ಲಿನ ಬಂಟ್ವಾಳ- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ 11 ವರ್ಷ ವಯಸ್ಸಿನ ಜಿಂಕೆ ರಸ್ತೆಯ ಈ ಬದಿಯಿಂದ ಆ ಬದಿಗೆ ಹೋಗುತ್ತಿದ್ದ ವೇಳೆ ಕಾರಿಗೆ ಸಿಲುಕಿದೆ.

ಸ್ಥಳಕ್ಕೆ ಅರಣ್ಯಾಧಿಕಾರಿಗಳು ತೆರಳಿದ್ದು, ಪರಿಶೀಲನೆ ನಡೆಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.