ವಿರಾಜಪೇಟೆ: ಪಟ್ಟಣದ ಮೀನುಪೇಟೆಯಲ್ಲಿ ಸೋಮವಾರ ಮುಂಜಾನೆ ಸರಣಿ ಅಪಘಾತ ನಡೆದಿದೆ.
ಮೀನುಪೇಟೆಯ ರಸ್ತೆ ಬದಿಯಲ್ಲಿ ನಿಲುಗಡೆ ಮಾಡಿದ್ದ ಕಾರಿಗೆ ಕೇರಳ ಕಡೆಗೆ ಸಾಗುತ್ತಿದ್ದ ಕಾರೊಂದು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಒಟ್ಟು 3 ಕಾರುಗಳಿಗೆ ಹಾನಿಯಾಗಿದೆ. ಘಟನೆ ಮುಂಜಾನೆ ನಡೆದಿದ್ದರಿಂದ ಹೆಚ್ಚಿನ ಅನಾಹುತ ಸಂಭವಿಸಲಿಲ್ಲ.
ಈ ಕುರಿತು ಇಲ್ಲಿನ ನಗರ ಠಾಣೆಯಲ್ಲಿ ಕಾರು ಚಾಲಕ ವಿವೇಕ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.