ADVERTISEMENT

ನಾಪೋಕ್ಲು: ಪ್ರಪಾತಕ್ಕೆ ಉರುಳಿದ ಕಾರು

​ಪ್ರಜಾವಾಣಿ ವಾರ್ತೆ
Published 17 ಜೂನ್ 2024, 16:29 IST
Last Updated 17 ಜೂನ್ 2024, 16:29 IST
ನಾಪೋಕ್ಲು ಸಮೀಪದ ಬೆಟ್ಟಗೇರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಕಾರು
ನಾಪೋಕ್ಲು ಸಮೀಪದ ಬೆಟ್ಟಗೇರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಕಾರು   

ನಾಪೋಕ್ಲು: ಇಲ್ಲಿಗೆ ಸಮೀಪದ ಬೆಟ್ಟಗೇರಿಯ ತಳೂರು ಜಂಕ್ಷನ್ ಬಳಿ ಭಾನುವಾರ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪ್ರಪಾತಕ್ಕೆ ಉರುಳಿದೆ.

ಭಾಗಮಂಡಲದಿಂದ ಮಡಿಕೇರಿಗೆ ತಿ.ನರಸೀಪುರದ ನಿವಾಸಿ ನಾಗೇಂದ್ರ ಅವರು ಕುಟುಂಬ ಸಮೇತರಾಗಿ ಹೊರಟಾಗ ರಸ್ತೆಹೊಂಡಗಳನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಅವಘಡವಾಗಿದೆ.

ಕಾರಿನಲ್ಲಿದ್ದ ನಾಗೇಂದ್ರ, ಪತ್ನಿ ಮತ್ತು ಮಗುವಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ADVERTISEMENT

ಪೊಲೀಸರು ಸ್ಥಳೀಯರ ಸಹಕಾರದಿಂದ ಜಖಂಗೊಂಡ ಕಾರನ್ನು ಮೇಲೆತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.