ADVERTISEMENT

ಗಾಂಜಾ, ಎಂಡಿಎಂಎ ಮಾರಾಟ; ಮೂವರ ಬಂಧನ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2024, 5:53 IST
Last Updated 4 ಏಪ್ರಿಲ್ 2024, 5:53 IST

ಮಡಿಕೇರಿ: ಕೊಡಗು ಜಿಲ್ಲೆಯ ತಿತಿಮತಿಯ ಮೈಸೂರು– ವಿರಾಜಪೇಟೆ ಹೆದ್ದಾರಿಯಲ್ಲಿ ಮಾದಕವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಕೇರಳ ರಾಜ್ಯದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕೇರಳದ ತಾಮರಶೇರಿ ಪಟ್ಟಣದ ನಿವಾಸಿಗಳಾದ ಮಹಮ್ಮದ್ ಅಶ್ರಫ್ (49), ತಸ್ವೀಕ್ (24), ಎ.ಟಿ.ಅಲ್ಯಾಜ್ (27)  ಬಂಧಿತ ಆರೋಪಿಗಳು. ಇವರಿಂದ 1.4 ಕೆ.ಜಿ ಗಾಂಜಾ ಮತ್ತು 2 ಗ್ರಾಂ ಎಂಡಿಎಂಎ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿರಾಜಪೇಟೆ ಉಪವಿಭಾಗದ ಡಿವೈಎಸ್‌ಪಿ ಆರ್.ಮೋಹನ್‌ ಕುಮಾರ್, ಸಿಪಿಐ ಶಿವರಾಜ್ ಮುಧೋಳ್, ಸಬ್‌ಇನ್‌ಸ್ಪೆಕ್ಟರ್ ರೂಪಾದೇವಿ ಬಿರಾದಾರ್ ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.