ADVERTISEMENT

ಪಾಡಿಯಲ್ಲಿ ಮಳೆಗಾಗಿ ವಿಶೇಷ ಪೂಜೆ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2024, 8:13 IST
Last Updated 9 ಏಪ್ರಿಲ್ 2024, 8:13 IST
ನಾಪೋಕ್ಲು ಸಮೀಪದ ಕಕ್ಕಬೆಯ ಪಾಡಿ ಇಗ್ಗುತ್ತಪ್ಪ  ದೇವಾಲಯದಲ್ಲಿ ಮಳೆಗಾಗಿ ವಿಶೇಷ ಪೂಜೆಯನ್ನು ಸೋಮವಾರ ಅರ್ಚಕ ಕುಶ ಭಟ್ ನೆರವೇರಿಸಿದರು. 
ನಾಪೋಕ್ಲು ಸಮೀಪದ ಕಕ್ಕಬೆಯ ಪಾಡಿ ಇಗ್ಗುತ್ತಪ್ಪ  ದೇವಾಲಯದಲ್ಲಿ ಮಳೆಗಾಗಿ ವಿಶೇಷ ಪೂಜೆಯನ್ನು ಸೋಮವಾರ ಅರ್ಚಕ ಕುಶ ಭಟ್ ನೆರವೇರಿಸಿದರು.    

ನಾಪೋಕ್ಲು: ಸಮೀಪದ ಕಕ್ಕಬೆಯ ಪಾಡಿ ಇಗ್ಗುತ್ತಪ್ಪ ದೇವಾಲಯದಲ್ಲಿ ಮಳೆಗಾಗಿ ವಿಶೇಷ ಪೂಜೆಯನ್ನು ಸೋಮವಾರ ಸಲ್ಲಿಸಲಾಯಿತು.

  ಇಗ್ಗುತ್ತಪ್ಪ ಸನ್ನಿಧಿಯಲ್ಲಿ ಸೋಮವಾರ ಪ್ರಾತಕಾಲ 5.45 ರಿಂದ 6.45 ರವರೆಗೆ ರುದ್ರಾಭಿಷೇಕ ಪೂಜೆ ಹಾಗೂ ವಿವಿಧ ವಿಶೇಷ ಪೂಜಾ ಸೇವೆಗಳನ್ನು ನಡೆಸಲಾಯಿತು.

ಭಕ್ತ ಜನ ಸಂಘದ ಪದಾಧಿಕಾರಿಗಳು ಹಾಗೂ ಭಕ್ತರು ಸೇರಿ 101 ಎಳೆನೀರು ಅಭಿಷೇಕ, ಹಾಲು ಅಭಿಷೇಕ ನೆರವೇರಿಸಿದರು. ಭಕ್ತರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಭಕ್ತ ಜನ ಸಂಘದ ಕಾರ್ಯಕಾರಿ ಮಂಡಳಿ ಸದಸ್ಯರು  ಹಾಜರಿದ್ದರು. ಅರ್ಚಕ ಕುಶ ಭಟ್ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.