ಸೋಮವಾರಪೇಟೆ: ಇಲ್ಲಿನ ಸರ್ವೆ ಕಚೇರಿಯಲ್ಲಿ ₹ 4 ಸಾವಿರ ಲಂಚ ಪಡೆಯುತ್ತಿದ್ದ ಆರೋಪ ಮೇರೆಗೆ ಸರ್ವೇಯರ್ ಎಚ್.ಕೆ.ಮಹದೇವೇಗೌಡ ಅವರನ್ನು ಲೋಕಾಯುಕ್ತ ಪೊಲೀಸರು ಮಂಗಳವಾರ ಬಂಧಿಸಿದರು.
ಎಡಿಎಲ್ಆರ್ ಕಚೇರಿಯಲ್ಲಿ ಸರ್ವೇಯರ್ ಆಗಿದ್ದ ಆರೋಪಿಯು ಅಕ್ರಂಪಾಷಾ ಎಂಬುವವರಿಗೆ ಪ್ರಾಪರ್ಟಿ ಕಾರ್ಡ್ ಕೊಡುವುದಕ್ಕೆ ₹ 5 ಸಾವಿರ ಲಂಚಕ್ಕೆ ಬೇಡಿಕೆ ಇರಿಸಿ, ₹ 1 ಸಾವಿರವನ್ನು ಮುಂಗಡವಾಗಿಯೇ ಪಡೆದಿದ್ದರು.
ಬಳಿಕ, ಅಕ್ರಂ ಪಾಷಾ ಲೋಕಾಯುಕ್ತರಿಗೆ ದೂರು ನೀಡಿದ್ದರು. ಉಳಿದ ₹ 4 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಆರೋಪಿಯನ್ನು ಬಂಧಿಸಲಾಯಿತು ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.
ಮಡಿಕೇರಿ ಲೋಕಾಯುಕ್ತ ಡಿವೈಎಸ್ಪಿ ಪವನ್ ಕುಮಾರ್, ಇನ್ಸ್ಪೆಕ್ಟರ್ ಲೋಕೇಶ್ ಅವರ ನೇತೃತ್ವದ ತಂಡ ಕಾರ್ಯಾಚರಣೆಯಲ್ಲಿ ಭಾಗವಹಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.