ADVERTISEMENT

ಗೋಣಿಕೊಪ್ಪಲು | ಹುಲಿ ದಾಳಿಗೆ ಹಸು ಸಾವು

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2024, 13:44 IST
Last Updated 5 ಮಾರ್ಚ್ 2024, 13:44 IST

ಗೋಣಿಕೊಪ್ಪಲು: ಟಿ.ಶೆಟ್ಟಿಗೇರಿ ಬಳಿಯ ತಾವಳಗೇರಿಯಲ್ಲಿ ಮಂಗಳವಾರ ಬೆಳಿಗ್ಗೆ 8 ಗಂಟೆ ವೇಳೆಯಲ್ಲಿ ಗದ್ದೆ ಬಯಲಿಗೆ ಮೇಯಲು ಬಿಟ್ಟಿದ್ದ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದು ಹಾಕಿದೆ.

ಹುಲಿ ಹಸುವಿನ ಕುತ್ತಿಗೆ ಕಚ್ಚಿದ್ದರಿಂದ ತೀವ್ರ ರಕ್ತಸ್ರಾವವಾಗಿ ಸತ್ತಿದೆ ಎಂದು ಮಾಲೀಕ ತಡಿಯಂಗಡ ಕರುಂಬಯ್ಯ ಹೇಳಿದ್ದಾರೆ.

ಸ್ಥಳಕ್ಕೆ ಪೊನ್ನಂಪೇಟೆ ಅರಣ್ಯ ಅಧಿಕಾರಿ ಶಂಕರ್ ಭೇಟಿ ನೀಡಿ ಪರಿಶೀಲಿಸಿದರು.

ADVERTISEMENT

ಸ್ಥಳೀಯರ ಆಕ್ರೋಶ: ‘ಪೊನ್ನಂಪೇಟೆ ತಾಲ್ಲೂಕಿನಾದ್ಯಂತ ಹುಲಿಗಳು ದಾಳಿ ಮಾಡಿ ಜಾನುವಾರುಗಳನ್ನು ಕೊಂದು ಹಾಕುತ್ತಿವೆ. ಅರಣ್ಯ ಇಲಾಖೆ ಇದರ ಬಗ್ಗೆ ಯಾವುದೇ ಕ್ರಮಕೈಗೊಂಡಿಲ್ಲ. ಇದರಿಂದ ಕೃಷಿಕರು ಸಂಕಷ್ಟ ಎದುರಿಸುವಂತಾಗಿದೆ. ಈಗಲಾದರೂ ಅರಣ್ಯ ಇಲಾಖೆ ಎಚ್ಚೆತ್ತುಕೊಂಡು ಜಾನುವಾರುಗಳನ್ನು ಸಂರಕ್ಷಿಸಲಿ’ ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.